
ಹರಿಹರ/ದಾವಣಗೆರೆ [ಜು.14]: ನಾಯಕ ಸಮಾಜಕ್ಕೆ ಶಿಕ್ಷಣ, ಉದ್ಯೋಗದಲ್ಲೂ ಶೇ.7.5 ಮೀಸಲಾತಿ ಸಿಗಬೇಕೆಂಬ ಬೇಡಿಕೆ ಈಡೇರಲೇಬೇಕು. ಈ ಬಗ್ಗೆ ವಿಳಂಬ ಮಾಡಿದರೆ ನಮ್ಮ ಸಮುದಾಯದ 15 ಶಾಸಕರೂ ತಮ್ಮ ಶಾಸಕತ್ವಕ್ಕೆ ಪಕ್ಷಾತೀತವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ರಾಜನಹಳ್ಳಿ ಶ್ರೀವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದ ಪುರಿ ಸ್ವಾಮೀಜಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಹರಿಹರ ತಾಲೂಕು ರಾಜನಹಳ್ಳಿ ಗ್ರಾಮದ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ ಶನಿವಾರ ನಾಯಕ ಸಮಾಜ ಜನ ಜಾಗೃತಿ ಸಮಾವೇಶದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಸರ್ಕಾರ ಯಾವುದೇ ಇರಲಿ.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಇನ್ನೆರೆಡು ತಿಂಗಳಲ್ಲೇ ನಮ್ಮ ಬೇಡಿಕೆ ಈಡೇರಬೇಕು. ಸಮ್ಮಿಶ್ರ ಸರ್ಕಾರ ಕೇಳಿದ್ದ 2 ತಿಂಗಳ ಕಾಲಾವಧಿಯಲ್ಲೇ ಕೇಂದ್ರಮಾದರಿಯಲ್ಲಿ ಪರಿಶಿಷ್ಟಪಂಗಡಕ್ಕೆ ಶೇ.7.5 ಮೀಸಲಾತಿ ನೀಡಬೇಕು ಎಂದರು. ಒಂದು ವೇಳೆ ನೀಡದಿದ್ದರೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಈ ಮೂರೂ ಪಕ್ಷಗಳ ಶಾಸಕರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಮತ್ತೆ ಸರ್ಕಾರದ ವಿರುದ್ಧ ತೀವ್ರ ಸ್ವರೂಪದ ಹೋರಾಟಕ್ಕಿಳಿಯುತ್ತೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.