
ಲಕ್ನೋ : ಉತ್ತರ ಪ್ರದೇಶದಲ್ಲಿ ಬಿಜೆಪಿ ಮುಖಂಡರು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ವೇದಿಕೆ ಕುಸಿದಿದ್ದು, ಈ ವೇಳೆ ಹಲವರು ಗಾಯಗೊಂಡಿದ್ದಾರೆ.
ಇಲ್ಲಿನ ಬಿಜೆಪಿ ಮುಖಂಡರು ಆಯೋಜಿಸಿದ್ದ ಹೋಲಿ ಮಿಲನ್ ಕಾರ್ಯಕ್ರಮದ ವೇಳೆ ವೇದಿಕೆ ಕುಸಿದಿದ್ದು ಬಿಜೆಪಿ ಕಿಸಾನ್ ಮೋರ್ಚಾ ಮುಖಂಡ ಅವದೇಶ್ ಯಾದವ್ ಸೇರಿ ಹಲವರು ಗಾಯಗೊಂಡಿದ್ದಾರೆ.
ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯ ನಾಯಕರು ಸೇರಿದ್ದುದೆ ಇದಕ್ಕೆ ಕಾರಣವಾಗಿದೆ. ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದಂತೆ ಏಕಾ ಏಕಿ ವೇದಿಕೆ ಕುಸಿದು ಬಿದ್ದಿದೆ.
ಈ ಹಿಂದೆಯೂ ಕೂಡ ಉತ್ತರ ಪ್ರದೇಶದಲ್ಲಿ ಹಲವು ವೇದಿಕೆ ಕುಸಿತದ ಪ್ರಕರಣಗಳು ವರದಿಯಾಗಿವೆ.
2017ರಲ್ಲಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅಲಹಾಬಾದ್ ನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಅಖಿಲೇಶ್ ಯಾದವ್ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿದ್ದ ವೇದಿಕೆ ಕುಸಿದು ಬಿದ್ದು, ಹಲವರು ಗಾಯಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.