
ನವದೆಹಲಿ (ಜೂ.09): ಮುಂದಿನ ತಿಂಗಳಿನಿಂದ ತೆರಿಗೆ ಪಾವತಿ ಮಾಡುವಾಗ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ನೀಡಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಜೊತೆಗೆ ಆಧಾರ್ ಕಾರ್ಡ್ ಡೇಟಾ ಸೋರಿಕೆಯಾಗುತ್ತಿರುವುದರ ಬಗ್ಗೆ ಎಚ್ಚರಿಕೆ ನೀಡಿದೆ.
ಕೆಲ ದಿನಗಳ ಹಿಂದೆ ಪಾನ್ ಕಾರ್ಡ್ ಗಳಿಗೂ ಕೂಡಾ ಆಧಾರನ್ನು ಕಡ್ಡಾಯಗೊಳಿಸಲಾಗಿತ್ತು. ಈಗಾಗಲೇ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಸಲ್ಲಿಸಿರುವವರು ಐಟಿ ರಿಟರ್ನ್ಸ್ ಫೈಲ್ ಮಾಡುವಾಗ ಅದರ ಲಿಂಕನ್ನು ಕೊಡಬೇಕು ಎಂದು ನ್ಯಾ.ಎ.ಕೆ ಸಿಕ್ರಿ ಮತ್ತು ಅಶೋಕ್ ಭೂಷಣ್ ಸದಸ್ಯ ಪೀಠವು ಹೇಳಿದೆ. ಕೇಂದ್ರ ಸರ್ಕಾರದ ಆಧಾರ ಯೋಜನೆಯು ಖಾಸಗಿ ಮಾಹಿತಿಗಳು ಸೋರುವ ಅಪಾಯವಿದೆಯೇ, ಖಾಸಗಿ ಹಕ್ಕು ಉಲ್ಲಂಘನೆಯಾಗುತ್ತದೆಯೇ ಎಂಬುದನ್ನು ಪ್ರಶ್ನಿಸಿ ಸಾಕಷ್ಟು ಅರ್ಜಿಗಳು ಬಂದಿದ್ದವು. ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ ಮಾಹಿತಿ ಸೋರಿಕೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಆಧಾರ್ ಕಾರ್ಡ್ ನೀಡದೇ ಇರುವ ಪಾನ್ ಕಾರ್ಡನ್ನು ನ್ಯಾಯಾಲಯ ತೀರ್ಮಾನಿಸುವವವರೆಗೆ ಅಮಾನ್ಯಗೊಳಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.