ಲಿಂಗಾಯತರು ಅಲ್ಪಸಂಖ್ಯಾತರೆಂದು ಮಾನ್ಯತೆ ನೀಡಿದ ರಾಜ್ಯ ಸರಕಾರ

Published : Mar 23, 2018, 06:43 PM ISTUpdated : Apr 11, 2018, 12:42 PM IST
ಲಿಂಗಾಯತರು ಅಲ್ಪಸಂಖ್ಯಾತರೆಂದು ಮಾನ್ಯತೆ ನೀಡಿದ ರಾಜ್ಯ ಸರಕಾರ

ಸಾರಾಂಶ

ರಾಜ್ಯ ಸರಕಾರ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಧರ್ಮವೆಂದು ಮಾನ್ಯತೆ ನೀಡಿದ್ದು, ಕೇಂದ್ರ ಸರಕಾರ ಧರ್ಮಕ್ಕೆ ಅನುಮೋದನೆ ನೀಡಿದಂದಿನಿಂದ ಈ ಮಾನ್ಯತೆ ಜಾರಿಯಾಗಲಿದೆ.

ಬೆಂಗಳೂರು: ಪರ ವಿರೋಧಗಳ ನಡುವೆ ರಾಜ್ಯ ಸರಕಾರ ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪಿಸಲು ಕೇಂದ್ರಕ್ಕೆ ಶಿಫಾರಸು ಮಾಡುತ್ತಿದ್ದು, ಈ ಬೆನ್ನಲ್ಲೇ ರಾಜ್ಯ ಸರಕಾರ ಈ ಧರ್ಮಕ್ಕೆ ಅಲ್ಪಸಂಖ್ಯಾತ ಧರ್ಮವೆಂದು ಮಾನ್ಯತೆ ನೀಡಿದೆ. ಕೇಂದ್ರ ಸರಕಾರ ಧರ್ಮಕ್ಕೆ ಅನುಮೋದನೆ ನೀಡಿದಂದಿನಿಂದ ಈ ಮಾನ್ಯತೆ ಜಾರಿಯಾಗಲಿದೆ.

ರಾಜ್ಯ ಅಲ್ಪಸಂಖ್ಯಾತ ಆಯೋಗವು ರಾಜ್ಯ ಸರಕಾರಕ್ಕೆ ಮಾಡಿರುವ ಶಿಫರಸ್ಸನ್ನು ಪರಿಗಣಿಸಿ, ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಅಧಿನಿಯಮದಂತೆ ಈ ಮಾನ್ಯತೆ ನೀಡಲಾಗಿದೆ, ಎಂದು ಸರಕಾರದ ಅಧಿಸೂಚನೆ ಹೇಳಿದೆ.

ರಾಜ್ಯ ಸರಕಾರವು ಪ್ರಸ್ತುತ ಇರುವ ಧಾರ್ಮಿಕ ಅಲ್ಪಸಂಖ್ಯಾತರ ಮೀಸಲಾತಿ ಸೌಲಭ್ಯಗಳನ್ನು ಒಳಗೊಂಡಂತೆ ಹಕ್ಕು ಹಾಗೂ ಆಸಕ್ತಿಗಳಿಗೆ ಧಕ್ಕೆ ಬಾರದಂತೆ, ಲಿಂಗಾಯತ ಹಾಗೂ ಬಸವ ತತ್ವಗಳನ್ನು ನಂಬುವ ವೀರಶೈವ ಲಿಂಗಾಯತ ಸಮುದಾಯವನ್ನು ಧಾರ್ಮಿಕ ಅಲ್ಪಸಂಖ್ಯಾತರೆಂದು ಮಾನ್ಯತೆ ನೀಡಲಾಗಿದೆ, ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾಯಕತ್ವ ಬದಲಾವಣೆ ಹೇಳಿಕೆ ಒಂದು ತಿಂಗಳ ಮೌನವ್ರತ : ಪಿ.ರವಿಕುಮಾರ್
ಡಿಕೆ ಊಟ ವರ್ಸಸ್‌ ಸಿದ್ದು ನಾಷ್ಟ! ಕಾಂಗ್ರೆಸ್‌ ಬಣಗಳ ಔತಣ ಸಮರ