ಪರಿಶಿಷ್ಟ ಜಾತಿ, ಪಂಗಡ ನೌಕರರ ಬಡ್ತಿ ಮೀಸಲಾತಿ : ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರದ ತೀರ್ಮಾನ

Published : Aug 07, 2017, 09:12 PM ISTUpdated : Apr 11, 2018, 01:10 PM IST
ಪರಿಶಿಷ್ಟ ಜಾತಿ, ಪಂಗಡ ನೌಕರರ ಬಡ್ತಿ ಮೀಸಲಾತಿ : ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರದ ತೀರ್ಮಾನ

ಸಾರಾಂಶ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭ ನೇತೃತ್ವದ ಸಮಿತಿ ಕರ್ನಾಟಕ ಕಾನೂನು ಆಯೋಗಕ್ಕೆ ನೀಡಿದ್ದ ವರದಿ ಆಧರಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಆ ಪ್ರಕಾರ 1978ರ ಕಾಯ್ದೆಯ ಸೆಕ್ಷನ್ 3 ಹಾಗೂ 4 ಕ್ಕೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಯಾವುದೇ ಅಧಿಕಾರಿ ಹಿಂಬಡ್ತಿ ಹೊಂದದಂತೆ ತಡೆಯಲು ಉದ್ದೇಶಿಸಲಾಗಿದೆ.

ಬೆಂಗಳೂರು(ಆ.07): ಬಡ್ತಿ ಮೀಸಲಾತಿ ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ್ದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಬೆಂಗಳೂರಿನ ವಿಧಾನಸೌಧದಲ್ಲಿಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಡ್ತಿ ಮೀಸಲಾತಿ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನಲೆಯಲ್ಲಿ ಸುಧೀರ್ಘ ಚರ್ಚೆ ನಡೆಯಿತು. ಈ ಚರ್ಚೆಯ ವೇಳೆ ಇದೇ 9ರಂದು ರಾಜ್ಯ ಸರ್ಕಾರ ಅಫಿಡವಿಟ್ ಸಲ್ಲಿಸಬೇಕಿರುವ ಹಿನ್ನಲೆಯಲ್ಲಿ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಿ ನಾಳೆಯೇ ರಾಜ್ಯಪಾಲರಿಗೆ ಕಳುಹಿಸಲು ನಿರ್ಧರಿಸಲಾಗಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭ ನೇತೃತ್ವದ ಸಮಿತಿ ಕರ್ನಾಟಕ ಕಾನೂನು ಆಯೋಗಕ್ಕೆ ನೀಡಿದ್ದ ವರದಿ ಆಧರಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಆ ಪ್ರಕಾರ 1978ರ ಕಾಯ್ದೆಯ ಸೆಕ್ಷನ್ 3 ಹಾಗೂ 4 ಕ್ಕೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಯಾವುದೇ ಅಧಿಕಾರಿ ಹಿಂಬಡ್ತಿ ಹೊಂದದಂತೆ ತಡೆಯಲು ಉದ್ದೇಶಿಸಲಾಗಿದೆ. ಇಂಧನ, ನೀರಾವರಿ ಹಾಗೂ ಲೋಕೋಪಯೋಗಿ ಇಲಾಖೆಯ ಸುಮಾರು 100ಕ್ಕೂ ಹೆಚ್ಚು ಅಧಿಕಾರಿಗಳು ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ತೀರ್ಮಾನದಿಂದ ನಿಟ್ಟುಸಿರು ಬಿಡುವಂತಾಗಿದೆ.

(ಸಂಗ್ರಹ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೋಟೆಲ್‌ಗಳಿಗೆ ನಾಳೆಯಿಂದ ಸಿಗುತ್ತೆ ಇನ್ನಷ್ಟು ಎಲ್‌ಪಿಜಿ!
ಉಗ್ರರ ತಾಣವಾಗಿದ್ದ ಅಲ್‌ ಫಲಾ ವಿವಿ ಹರ್ಯಾಣ ಸರ್ಕಾರದ ವಶಕ್ಕೆ