
ಬೆಂಗಳೂರು (ಜ.30): ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ? ನಾಳೆ 6 ನೇ ವೇತನ ಯೋಗದ ವರದಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕೈ ಸೇರಲಿದೆ . ವೇತನ ಆಯೋಗದ ಅಧ್ಯಕ್ಷ ಎಂ.ಆರ್.ಶ್ರೀನಿವಾಸ ಮೂರ್ತಿ ಸಿಎಂಗೆ ವರದಿ ಹಸ್ತಾಂತರಿಸಲಿದ್ದಾರೆ. ವರದಿಯಲ್ಲಿ ಶೇಕಡಾ 25 ರಿಂದ 30 ರಷ್ಟು ವೇತನ ಹೆಚ್ಚಳದ ಶಿಫಾರಸ್ಸು ಮಾಡಿದ್ದು, ಸಿಎಂ ಸಿದ್ದರಾಮಯ್ಯ ರಾಜ್ಯ ನೌಕರರಿಗೆ ಎಷ್ಟು ಹೆಚ್ಚಳ ಮಡಲಿದ್ದಾರೆ ಎಂಬುದು ಸದ್ಯದ ಕುತೂಹಲ.
ಚುನಾವಣಾ ಹತ್ತಿರವಾಗುತ್ತಿದ್ದಂತೆ ಸರ್ಕಾರ ನೌಕರರ ಸೆಳೆಯುವ ನಿಟ್ಟಿನಲ್ಲಿ ನಿರೀಕ್ಷಿತ ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮೂಲ ವೇತನದ ಮೇಲೆ ಶೇಕಡಾ 25 ರಿಂದ 30 ರಷ್ಟು ವೇತನ ಹೆಚ್ಚಳದ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ನಾಳೆ ಸಲ್ಲಿಕೆಯಾಗುವ ವೇತನ ಆಯೋಗದ ವರದಿಯ ಮೇಲೆ ಕುತೂಹಲ ಹೆಚ್ಚಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.