
ಮಂಗಳೂರು(ಆ.08): RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಒಡೆತನದ ಶಾಲೆಗಳಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ. ಪ್ರಭಾಕರ್ ಭಟ್ ಒಡೆತನದ ಶಾಲೆಗಳಾದ ಶ್ರೀರಾಮಕೇಂದ್ರ, ಶ್ರೀದೇವಿ ವಿದ್ಯಾಕೇಂದ್ರದ ದತ್ತು ಆದೇಶವನ್ನು ಸರ್ಕಾರ ರದ್ದುಗೊಳಿಸಿದೆ.
ಈ ವಿದ್ಯಾಸಂಸ್ಥೆಗಳನ್ನು ಕೊಲ್ಲೂರು ಮೂಕಾಂಬಿಕ ದೇವಸ್ಥಾನದ ವತಿಯಿಂದ ಕಲ್ಲಡ್ಕ ಪ್ರಭಾಕರ್ ಭಟ್ ದತ್ತು ಪಡೆದಿದ್ದರು. ಆದರೀಗ ಹಿಂದೂ ಧಾರ್ಮಿಕ ದತ್ತಿ ಅಧಿನಿಯಮದಂತೆ ಖಾಸಗಿ ಶಾಲೆ ದತ್ತು ಪಡೆಯಲು ಅಧಿಕಾರವಿಲ್ಲ. ನಿಯಮದ ಪ್ರಕಾರ ದೇವಸ್ಥಾನಕ್ಕೆ ನಷ್ಟ ಆಗುತ್ತೆ ಅನ್ನೋ ಕಾರಣ ನೀಡಿರುವ ರಾಜ್ಯ ಸರ್ಕಾರ ಈ ದತ್ತು ಆದೇಶವನ್ನು ರದ್ದುಗೊಳಿಸಿದೆ.
ಯಡಿಯೂರಪ್ಪ ಅವಧಿಯಲ್ಲಿ ದೇವಸ್ಥಾನ ಆಡಳಿತ ಮಂಡಲಿಯಿಂದ ೀ ಶಿಕ್ಷಣ ಸಂಸ್ಥೆಗಳನ್ನು ಕಲ್ಲಡ್ಕ ಪ್ರಭಾಕರ್ ಭಟ್ ಅವರು ದತ್ತು ಪಡೆದಿದ್ದರು. ಇನ್ನು ಡಿಕೆಶಿ ಮೇಲೆ ಬಿಜೆಪಿ ಪ್ರಯೋಗಿಸಿದ ಐಟಿ ದಾಳಿಯ ಬೆನ್ನಲ್ಲೇ ಕಾಂಗ್ರೆಸ್ ಆಡಳಿತದ ರಾಜ್ಯ ಸರ್ಕಾರ ರದ್ದು ಆದೇಶ ಹೊರಡಿಸಿರುವುದು ಸಾಕಷ್ಟು ಅನುಮಾನಗಳನ್ನು ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.