ರಾಜ್ಯ ಸರ್ಕಾರಕ್ಕೆ ರಾಷ್ಟ್ರಪ್ರಶಸ್ತಿ

Published : Sep 24, 2016, 11:41 PM ISTUpdated : Apr 11, 2018, 12:51 PM IST
ರಾಜ್ಯ ಸರ್ಕಾರಕ್ಕೆ ರಾಷ್ಟ್ರಪ್ರಶಸ್ತಿ

ಸಾರಾಂಶ

ಬೆಂಗಳೂರು(ಸೆ.25): ಹಿರಿಯ ನಾಗರಿಕರ ಸೇವೆ ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ದೇಶದಲ್ಲೇ ಅತ್ಯುತ್ತಮ ಕಾರ್ಯಕ್ಷಮತೆಯ ರಾಷ್ಟ್ರೀಯ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ವಿಕಲಚೇತನ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪಡೆದಿದೆ.

ಅಲ್ಲದೇ ಹಿರಿಯ ನಾಗರಿಕರಿಗೆ ಸಂಬಂಧಿಸಿದ ಕಾಯಿಲೆ ಹಾಗೂ ಮಾನಸಿಕ ಸಮಸ್ಯೆಗಳ ಸಂಬಂಧ ನಡೆಸಿದ ಸಂಶೋಧನೆಗಳಿಗಾಗಿ ಬೆಂಗಳೂರಿನ ನಿಮ್ಹಾನ್ಸ್‌ ಸಂಸ್ಥೆ ರಾಷ್ಟ್ರಪ್ರಶಸ್ತಿ ಪಡೆದಿದೆ. ವೈಯಕ್ತಿಕ ವೃತ್ತಿಗಳಿಗೆ ನೀಡಲಾಗುವ ಹಿರಿಯ ನಾಗರಿಕ ಪ್ರಶಸ್ತಿಗಾಗಿ ಬೆಂಗಳೂರಿನ ಗಾಂಧಿ ಭವನದ ಅಧ್ಯಕ್ಷ ಹೋ.ಶ್ರೀನಿವಾಸಯ್ಯ ಅವರು ಆಯ್ಕೆಯಾಗಿದ್ದಾರೆ.

ಅ.1ರಂದು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಪ್ರಶಸ್ತಿ ಪ್ರದಾನ ಮಾಡುವರು ಎಂದು ವಿಕಲಚೇತನ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಉಮಾಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

--

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?