ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಲ್ಲಿ ಪೀಠ ಸ್ಥಾಪನೆಗೆ ಮುಂದಾದ ರಾಜ್ಯ ಸರ್ಕಾರ

Published : Oct 23, 2017, 03:36 PM ISTUpdated : Apr 11, 2018, 01:05 PM IST
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಲ್ಲಿ ಪೀಠ ಸ್ಥಾಪನೆಗೆ ಮುಂದಾದ ರಾಜ್ಯ ಸರ್ಕಾರ

ಸಾರಾಂಶ

ಚುನಾವಣಾ ಹೊಸ್ತಿಲಲ್ಲಿ ರಾಜ್ಯ ಸರ್ಕಾರದಿಂದ ವೋಟ್ ಬ್ಯಾಂಕ್ ತಂತ್ರದ ಮೊರೆ ಹೋಗಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಲ್ಲಿ ಪೀಠ ಸ್ಥಾಪನೆಗೆ ಮುಂದಾಗಿದೆ ಸರ್ಕಾರ. ಹೈಕಮಾಂಡ್ ಮನಗೆಲ್ಲಲು ಸಿಎಂ ಸಿದ್ದರಾಮಯ್ಯ ಹೊಸ ತಂತ್ರ ಹೆಣೆಯುತ್ತಿದ್ದಾರೆ ಅಂತ ಹೇಳಲಾಗುತ್ತಿದೆ. ಆದರೆ ಪೀಠ ಸ್ಥಾಪನೆಗೆ ಹಣ ಕೊಡಲು ಗ್ರಾಮಿಣಾಭಿವೃದ್ಧಿ ಇಲಾಖೆ ಹಿಂದೇಟು ಹಾಕಿದೆ.

ಬೆಂಗಳೂರು(ಅ.23): ಚುನಾವಣಾ ಹೊಸ್ತಿಲಲ್ಲಿ ರಾಜ್ಯ ಸರ್ಕಾರದಿಂದ ವೋಟ್ ಬ್ಯಾಂಕ್ ತಂತ್ರದ ಮೊರೆ ಹೋಗಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಲ್ಲಿ ಪೀಠ ಸ್ಥಾಪನೆಗೆ ಮುಂದಾಗಿದೆ ಸರ್ಕಾರ. ಹೈಕಮಾಂಡ್ ಮನಗೆಲ್ಲಲು ಸಿಎಂ ಸಿದ್ದರಾಮಯ್ಯ ಹೊಸ ತಂತ್ರ ಹೆಣೆಯುತ್ತಿದ್ದಾರೆ ಅಂತ ಹೇಳಲಾಗುತ್ತಿದೆ. ಆದರೆ ಪೀಠ ಸ್ಥಾಪನೆಗೆ ಹಣ ಕೊಡಲು ಗ್ರಾಮಿಣಾಭಿವೃದ್ಧಿ ಇಲಾಖೆ ಹಿಂದೇಟು ಹಾಕಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಪತ್ರ ಬರೆದಿರುವ ಸಿಎಂ ಸಚಿವಾಲಯ, ಪೀಠ ಸ್ಥಾಪನೆಗೆ 10 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಸಿಎಂ ಕಚೇರಿಯಿಂದ ಮನವಿ ಸಲ್ಲಿಸಲಾಗಿದೆ. ರಾಜೀವ್ ಗಾಂಧಿ ಯೋಜನೆಗಳನ್ನು, ಯೋಚನೆಗಳನ್ನು ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಶಾಶ್ವತವಾಗಿ ಜಾರಿಗೊಳಿಸುವುದು ಪೀಠ ಸ್ಥಾಪನೆಯ ಉದ್ದೇಶ. ಆರಂಭದಲ್ಲಿ  ತನ್ನಲ್ಲಿ ಈ ರೀತಿ ಅನುದಾನ ನೀಡಲು ಅವಕಾಶವಿಲ್ಲ, ಗ್ರಾ.ಪಂ.,  ತಾ. ಪಂ.,  ಮತ್ತು ಜಿ. ಪಂ. ಕಟ್ಟಡ ನಿರ್ಮಾಣ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ನಮ್ಮ ಇಲಾಖೆಯಲ್ಲಿ ಕೋರಿರುವ ವಿಚಾರಕ್ಕೆ ಅನುದಾನ ಅಲಭ್ಯವಿದೆ ಎಂದು ಪ್ರತಿಕ್ರಿಯಿಸಿತ್ತು ಗ್ರಾಮೀಣಾಭಿವೃದ್ಧಿ ಇಲಾಖೆ.

ಅಂತಿಮವಾಗಿ ಹಣಕಾಸು ಇಲಾಖೆ ಪ್ರಸ್ತಾವನೆ ಪರಿಶೀಲಿಸಿ, ವ್ಯಕ್ತಿಗಳ ಹೆಸರಿನಲ್ಲಿ ಪೀಠ ಸ್ಥಾಪನೆ ಹಾಗೂ ಸ್ಮಾರಕ ರಚನೆ ಮಾಡುವ ಪ್ರಸ್ತಾವನೆ ಪ್ರಸ್ತುತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುತ್ತೆ. ಪರಿಣಾಮ ಈಗ  10 ಕೋಟಿ ಬಿಡುಗಡೆ ಮಾಡಬೇಕಾದ ಜವಾಬ್ದಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೆಗಲೇರಿದೆ..

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್