ಮುಂದಿನ ವರ್ಷದಿಂದಲೇ ಸಿಲಬಸ್ ಬದಲಿಸಲು ಸರ್ಕಾರದ ಚಿಂತನೆ

Published : Dec 16, 2016, 02:52 AM ISTUpdated : Apr 11, 2018, 12:45 PM IST
ಮುಂದಿನ ವರ್ಷದಿಂದಲೇ ಸಿಲಬಸ್ ಬದಲಿಸಲು ಸರ್ಕಾರದ ಚಿಂತನೆ

ಸಾರಾಂಶ

1ರಿಂದ 10ನೇ ತರಗತಿಯವರೆಗೆ ಮುಂದಿನ ವರ್ಷದಿಂದ ಪರಿಷ್ಕೃತ ಪಠ್ಯ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಾ ಪಠ್ಯ ಬದಲಾವಣೆಗೆ ಒಲವು ವ್ಯಕ್ತಪಡಿಸಿದ್ದು, ಇದೀಗ ಸರ್ಕಾರ ಮತ್ತು ವಿಪಕ್ಷ ಬಿಜೆಪಿ ಮಧ್ಯೆ ಮತ್ತೆ  ತಿಕ್ಕಾಟಕ್ಕೆ ಕಾರಣವಾಗಿದೆ.

ಬೆಂಗಳೂರು(ಡಿ.16): 1ರಿಂದ 10ನೇ ತರಗತಿಯವರೆಗೆ ಮುಂದಿನ ವರ್ಷದಿಂದ ಪರಿಷ್ಕೃತ ಪಠ್ಯ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಾ ಪಠ್ಯ ಬದಲಾವಣೆಗೆ ಒಲವು ವ್ಯಕ್ತಪಡಿಸಿದ್ದು, ಇದೀಗ ಸರ್ಕಾರ ಮತ್ತು ವಿಪಕ್ಷ ಬಿಜೆಪಿ ಮಧ್ಯೆ ಮತ್ತೆ  ತಿಕ್ಕಾಟಕ್ಕೆ ಕಾರಣವಾಗಿದೆ.

ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರ ಆಕ್ಷೇಪ

2018-19ನೇ ಸಾಲಿನಲ್ಲಿ ಪರಿಷ್ಕೃತ ಪಠ್ಯ ಜಾರಿಗೊಳಿಸುವುದಾಗಿ ಕಳೆದ ಬೆಳಗಾವಿ ಅಧಿವೇಶನದಲ್ಲಿ ಶಿಕ್ಷಣ ಸಚಿವ ತನ್ವೀರ್​ ಸೇಠ್ ಹೇಳಿದ್ದರು. ಆದರೆ ಈಗ ಮುಂದಿನ ವರ್ಷದಿಂದಲೇ 1ರಿಂದ 10ನೇ ತರಗತಿಯವರೆಗೆ ಶಾಲಾ ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಜನವರಿ 15ರೊಳಗೆ ತನ್ನ ವರದಿ ಸಲ್ಲಿಸಲಿದೆ. .ಇದಾದ ಬಳಿಕ ಪರಿಶೀಲಿಸಿ ಸರ್ಕಾರ ಮುದ್ರಣದ ಬಗ್ಗೆ  ನಿರ್ಧಾರ ತೆಗೆದುಕೊಳ್ಳಲಿದೆ.

ತರಾತುರಿಯಲ್ಲಿ  ಸಿಲೆಬಸ್ ಬದಲಿಸಲು ಹೊರಟ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಆಕ್ಷೇಪ ಎತ್ತಿದೆ. ಅಷ್ಟೇ ಅಲ್ಲದೆ ಪರಿಷ್ಕೃತ ಪಠ್ಯದಲ್ಲಿ ಅಹಿಂದ ಪರ ಅಂಶ ಸೇರಿಸಲಾಗುತ್ತಿದೆ ಎಂದು ಆರೋಪಿಸಿದ ಬಿಜೆಪಿ, ಸಾರ್ಜಜನಿಕ ಅಭಿಪ್ರಾಯ ಪಡೆದ ಬಳಿಕವೇ ಪರಿಷ್ಕೃತ ಪಠ್ಯ ಜಾರಿಗೊಳಿಸುವಂತೆ ಆಗ್ರಹಿಸಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯ ಕೇಸರೀಕರಣಗೊಳಿಸಲಾಗಿದೆ ಎನ್ನುವ ಆರೋಪದ ಮೇಲೆ ಕಿಮ್ಮನೆ ರತ್ನಾಕರ ಅವರು ಶಿಕ್ಷಣ ಸಚಿವರಾಗಿದ್ದ ಪಠ್ಯ ಪರಿಷ್ಕರಣೆಗೆ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆದರೆ ಈಗ ಪರಿಷ್ಕೃತ ಪಠ್ಯಕ್ರಮದಲ್ಲಿ  ಅಹಿಂದ ವಿಚಾರ ಕೇಳಿ ಬರುತ್ತಿದೆ. ಒಟ್ಟಿನಲ್ಲಿ  ಸಿಲೆಬಸ್ ಬದಲಾವಣೆ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಡುವೆ ತಿಕ್ಕಾಟಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ