ಬಿಜೆಪಿ ಬೈಕ್ ರ್ಯಾಲಿ ಯಶಸ್ವಿಯಾಗದಂತೆ ತಡೆಯಲು ರಾಜ್ಯ ಸರ್ಕಾರ ಪ್ಲಾನ್?

Published : Sep 03, 2017, 08:10 AM ISTUpdated : Apr 11, 2018, 12:51 PM IST
ಬಿಜೆಪಿ ಬೈಕ್ ರ್ಯಾಲಿ ಯಶಸ್ವಿಯಾಗದಂತೆ ತಡೆಯಲು ರಾಜ್ಯ ಸರ್ಕಾರ ಪ್ಲಾನ್?

ಸಾರಾಂಶ

ಕರಾವಳಿ ಭಾಗದಲ್ಲಿ ಆರ್‌ಎಸ್ಎಸ್ ಕಾರ್ಯಕರ್ತರ ಹತ್ಯೆಯಾಗ್ತಿದೆ. ಹೀಗಾಗಿ ಸಚಿವ ರಾಮನಾಥ್ ರೈ ರಾಜೀನಾಮೆಗೆ ಆಗ್ರಹಿಸಿ ಸೆಪ್ಟೆಂಬರ್ 7 ರಂದು ಬಿಜೆಪಿ ಮಂಗಳೂರ ಚಲೋ ಹಮ್ಮಿಕೊಂಡಿದೆ.

ಬೆಂಗಳೂರು(ಸೆ.03): ಕರಾವಳಿ ಭಾಗದಲ್ಲಿ ಆರ್‌ಎಸ್ಎಸ್ ಕಾರ್ಯಕರ್ತರ ಹತ್ಯೆಯಾಗ್ತಿದೆ. ಹೀಗಾಗಿ ಸಚಿವ ರಾಮನಾಥ್ ರೈ ರಾಜೀನಾಮೆಗೆ ಆಗ್ರಹಿಸಿ ಸೆಪ್ಟೆಂಬರ್ 7 ರಂದು ಬಿಜೆಪಿ ಮಂಗಳೂರ ಚಲೋ ಹಮ್ಮಿಕೊಂಡಿದೆ.

ಬೈಕ್ ರ್ಯಾಲಿ ಮೂಲಕ ಮಂಗಳೂರಿಗೆ ತೆರಳುವ ಬಿಜೆಪಿ ಬಿಜೆಪಿ ಕಾರ್ಯಕರ್ತರು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. . ಮೈಸೂರು ಮತ್ತು ಮಡಿಕೇರಿಯಿಂದ ಬೈಕ್ ರ್ಯಾಲಿ ಮೂಲಕ ತೆರಳುವ ಬಿಜೆಪಿ ಕಾರ್ಯಕರ್ತರಿಗೆ ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ  ಸೆ. ೬ರ ರಾತ್ರಿ ಉಳಿದುಕೊಳ್ಳಲು ಬಿಜೆಪಿ ವ್ಯವಸ್ಥೆ ಕಲ್ಪಿಸಿದೆ. ಆದ್ರೆ ಬಿಜೆಪಿ ಬೈಕ್ ರ್ಯಾಲಿ ಯಶಸ್ವಿಯಾಗದಂತೆ ತಡೆಯಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡಿದೆ. 

ಬಿಜೆಪಿ ಬೈಕ್ ರ್ಯಾಲಿ ಯಶಸ್ವಿಯಾಗದಂತೆ ತಡೆಯಲು ಗೃಹ ಸಚಿವ ರಾಮಲಿಂಗಾರೆಡ್ಡಿಗೆ ಸೂಚಿಸಿರುವ ಸಿಎಂ, ಪೊಲೀಸ್ ಅಧಿಕಾರಿಗಳೂ ಕೂಡ ಬೈಕ್ ರ್ಯಾಲಿ ತಡೆಯುವಂತೆ ಆದೇಶಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಯ ನೆಪದಲ್ಲಿ  ಬೈಕ್ ರ್ಯಾಲಿ ಮೂಲಕ ಮಂಗಳೂರಿಗೆ ತೆರಳುವ ಬಿಜೆಪಿ ಕಾರ್ಯಕರ್ತರಿಗೆ ರಾತ್ರಿ ತಂಗಲು  ಅವಕಾಶವಾಗದಂತೆ ನೋಡಿಕೊಳ್ಳುವಂತೆ ಸುಳ್ಯ ಪೊಲೀಸರಿಗೆ ರಾಜ್ಯ ಸರ್ಕಾರ ತಾಕೀತು ಮಾಡಿದೆ.

ಹೀಗಾಗಿ  ಕಲಾ ಮಂದಿರ ಅಧ್ಯಕ್ಷರಿಗೆ ಪತ್ರ ಬರೆದಿರುವ ಸುಳ್ಯ ಪೊಲೀಸ್ ಠಾಣಾಧಿಕಾರಿ, ಬಿಜೆಪಿ ಕಾರ್ಯಕರ್ತರಿಗೆ ಅವಕಾಶ ನೀಡದಂತೆ  ತಾಕೀತು ಮಾಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೈಕಲ್‌ನಲ್ಲಿ ಓಡಾಡ್ತಿದ್ದ ಯೂಟ್ಯೂಬರ್ ಬಳಿ ಈಗ ಹಲವು ಐಷಾರಾಮಿ ಕಾರು: ದುಬೈನಲ್ಲಿ ಅದ್ದೂರಿ ಮದುವೆ: ಇಡಿ ದಾಳಿ
ಮಂಗಳೂರಿಗೆ 1200 ಕೋಟಿ ಯುಜಿಡಿ ಪ್ಲ್ಯಾನ್, ನಾಯಿಗಳ ಪುನರ್ವಸತಿಗೆ 10 ಎಕರೆ, ದಶಕಗಳ ಸಮಸ್ಯೆಗೆ ಸಿಗುವುದೇ ಮುಕ್ತಿ?