‘ನಮ್ಮ ಕ್ಯಾಂಟೀನ್’ ಘೋಷಣೆಗೆ ಸಿಎಂ ಸಿದ್ದರಾಮಯ್ಯ ಪ್ಲಾನ್: 5 ರೂಪಾಯಿಗೆ ಸಿಗಲಿದೆ ಊಟ-ಉಪಹಾರ

Published : Mar 04, 2017, 10:41 PM ISTUpdated : Apr 11, 2018, 12:40 PM IST
‘ನಮ್ಮ ಕ್ಯಾಂಟೀನ್’ ಘೋಷಣೆಗೆ ಸಿಎಂ ಸಿದ್ದರಾಮಯ್ಯ ಪ್ಲಾನ್: 5 ರೂಪಾಯಿಗೆ ಸಿಗಲಿದೆ ಊಟ-ಉಪಹಾರ

ಸಾರಾಂಶ

ಜನಪ್ರಿಯ ಬಜೆಟ್ ಮಂಡನೆಗೆ ಸಿದ್ದರಾಗಿರುವ ಸಿಎಂ ಸಿದ್ದರಾಮಯ್ಯ ತಮಿಳ್ನಾಡಿನ ಅಮ್ಮ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯದಲ್ಲಿ ‘ನಮ್ಮ ಕ್ಯಾಂಟೀನ್ ’ ಆರಂಭಿಸುವ ಬಗ್ಗೆ ಬಜೆಟ್​'ನಲ್ಲಿ ಘೋಷಣೆ ಮಾಡಲು ಸಿದ್ದರಾಗಿದ್ದಾರೆ. 

ಬೆಂಗಳೂರು(ಮಾ.05): ಜನಪ್ರಿಯ ಬಜೆಟ್ ಮಂಡನೆಗೆ ಸಿದ್ದರಾಗಿರುವ ಸಿಎಂ ಸಿದ್ದರಾಮಯ್ಯ ತಮಿಳ್ನಾಡಿನ ಅಮ್ಮ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯದಲ್ಲಿ ‘ನಮ್ಮ ಕ್ಯಾಂಟೀನ್ ’ ಆರಂಭಿಸುವ ಬಗ್ಗೆ ಬಜೆಟ್​'ನಲ್ಲಿ ಘೋಷಣೆ ಮಾಡಲು ಸಿದ್ದರಾಗಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ ೧೨ನೇ ಬಜೆಟ್ ನಲ್ಲಿ ಹಲವು ಜನಪ್ರಿಯ ಯೋಜನೆಗಳ ಘೋಷಣೆಗೆ ಸಿದ್ದತೆ ನಡೆಸಿದ್ದು, ತಮಿಳುನಾಡಿನ ಅಮ್ಮ ಕ್ಯಾಂಟೀನ್ ‌ಮಾದರಿಯಲ್ಲಿ "ನಮ್ಮ ಕ್ಯಾಂಟೀನ್" ಯೋಜನೆ ಈ ಪೈಕಿ ಪ್ರಮುಖವಾದುದು. 

ನಮ್ಮ ಕ್ಯಾಂಟೀನ್

ಮೊದಲ ಹಂತದಲ್ಲಿ ಬೆಂಗಳೂರಿನ ೧೯೮ ವಾರ್ಡ್ ಗಳಲ್ಲಿ ನಮ್ಮ ಕ್ಯಾಂಟೀನ್ ಆರಂಭಿಸಲು ತಯಾರಿ ನಡೆದಿದೆ. ಉಪಹಾರ ಹಾಗೂ ಊಟವನ್ನು ತಯಾರಿಸಿ ಕ್ಯಾಂಟೀನ್ ಗಳಿಗೆ ತಲುಪಿಸುವ ಹೊಣೆ ಅಕ್ಷಯ ಪಾತ್ರ ಸಂಸ್ಥೆಗೆ ವಹಿಸಲಾಗಿದೆ. ಕ್ಯಾಂಟೀನ್'ಗಳಲ್ಲಿ ವಿತರಿಸಲಾಗುವ ಪ್ರತಿ ಊಟ‌ ಅಥವಾ ಉಪಹಾರವನ್ನು ಐದು ರೂಪಾಯಿಗೆ ಸಾರ್ವಜನಿಕರಿಗೆ‌ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆದರೆ ಅಕ್ಷಯ ಪಾತ್ರ ಸಂಸ್ಥೆಗೆ ರಾಜ್ಯ ಸರ್ಕಾರ ಪ್ರತಿ ಊಟಕ್ಕೆ 20 ರೂಪಾಯಿ ನೀಡಲಿದೆ. ಆರಂಭದಲ್ಲಿ ರಾಜಧಾನಿಯಲ್ಲೇ ಪ್ರತಿನಿತ್ಯ 2ಲಕ್ಷ ಜನರಿಗೆ ಊಟ-ಉಪಹಾರ ವಿತರಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ಇದಕ್ಕಾಗಿ ವಾರ್ಷಿಕ ನೂರು ಕೋಟಿ ರೂಪಾಯಿ ವೆಚ್ಚವಾಗುವ ಲೆಕ್ಕಾಚಾರವನ್ನು ರಾಜ್ಯ ಸರ್ಕಾರ ಮಾಡಿದೆ. ತಮಿಳುನಾಡಿನ ಅಮ್ಮ ಕ್ಯಾಂಟೀನ್ ಗೆ ಸ್ಥಳೀಯ ಪಾಲಿಕೆಗಳು ಅನುದಾನ ನೀಡುತ್ತಿವೆ. ಆದರೆ ರಾಜ್ಯದಲ್ಲಿ ನಮ್ಮ ಕ್ಯಾಂಟೀನ್ ಯೋಜನೆ ಯಶಸ್ವಿಗೊಳಿಸಲೇಬೇಕೆಂದು ತೀರ್ಮಾನಿಸಿಯೇ ನೂತನ ಯೋಜನೆ ಘೋಷಣೆ ಮಾಡಲು ಸಜ್ಜಾಗಿರುವ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದಿಂದಲೇ ಅನುದಾನ ನೀಡಲು ಸಜ್ಜಾಗಿದ್ದಾರೆ.

ಅಕ್ಷಯಪಾತ್ರೆ ಸಂಸ್ಥೆ ಊಟ-ಉಪಹಾರ ತಯಾರಿಸಿ ಕ್ಯಾಂಟೀನ್​ಗಳಿಗೆ ತಂದು ಕೊಡುವ ಜವಾಬ್ದಾರಿ ಮಾತ್ರ ನಿರ್ವಹಿಸಲಿದೆ. ವಿತರಣೆಗೆ ಖಾಸಗಿಯವರಿಗೆ ಕ್ಯಾಂಟೀನ್​ಗೆ ಜಾಗ ನೀಡಿ ಅವರಿಗೆ ಪ್ರೋತ್ಸಾಹ ಧನ ಹಾಗೂ ಉಚಿತ ವಿದ್ಯುತ್, ನೀರು ನೀಡಲೂ ಸರ್ಕಾರ ತೀರ್ಮಾನಿಸಿದೆ.

ಬೆಳಗಿನ ಉಪಹಾರಕ್ಕಾಗಿ ಇಡ್ಲಿ ಸಾಂಬಾರ್​ ಚಟ್ನಿ ಅಥವಾ ರೈಸ್​ಬಾತ್​ ನೀಡುವ ಬಗ್ಗೆ ಚರ್ಚೆ ನಡೆದಿದೆ. ಹಾಗೆಯೇ, ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಅನ್ನ, ಸಾರು, ಮಜ್ಜಿಗೆ ಹಾಗೂ ಉಪ್ಪಿನಕಾಯಿ ನೀಡಲು ತೀರ್ಮಾನಿಸಲಾಗಿದೆ. ಒಟ್ಟಾರೆ, ಚುನಾವಣೆಗೂ ಮುನ್ನ ಅನುಷ್ಟಾನವಾಗಲಿರುವ ಕಟ್ಟಕಡೆಯ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ ನಮ್ಮ ಕ್ಯಾಂಟೀನ್ ಮೂಲಕ ಜನರ ಮನಸ್ಸು ಹಾಗೂ ಹೊಟ್ಟೆ ಎರಡನ್ನೂ ಗೆಲ್ಲಲು ರೂಪುರೇಷೆ ಸಿದ್ದಪಡಿಸಿದ್ದಾರೆ.

ವರದಿ: ವೀರೇಂದ್ರ ಉಪ್ಪುಂದ, ಸುವರ್ಣನ್ಯೂಸ್.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ