ರಾಜ್ಯ ಮಟ್ಟದ ಜಾನಪದ ಸಂಭ್ರಮ

Published : Aug 23, 2017, 12:23 AM ISTUpdated : Apr 11, 2018, 12:56 PM IST
ರಾಜ್ಯ ಮಟ್ಟದ ಜಾನಪದ ಸಂಭ್ರಮ

ಸಾರಾಂಶ

ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ವಿವಿಧ ಕಲಾತಂಡಗಳು ಆಗಮಿಸಿದ್ದವು. ಜಾನಪದ ಗೀತೆ, ಕರಡಿಮಜಲು, ವಿಭಿನ್ನ ಕುಣಿತ ಸೇರಿದಂತೆ ಅನೇಕ ಕಲಾತಂಡಗಳ ಪ್ರದರ್ಶನ ನರೆದಿದ್ದ ಜನರ ಮನಸೂರೆಗೊಂಡಿತು.

ಬಾಗಲಕೋಟೆ(ಆ.23): ವಿಶ್ವ ಜಾನಪದ ದಿನಾಚರಣೆಯ ಅಂಗವಾಗಿ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ರಾಜ್ಯ ಮಟ್ಟದ ಜಾನಪದ ಸಂಭ್ರಮಕ್ಕೆ ಚಾಲನೆ ನೀಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ವಿವಿಧ ಕಲಾತಂಡಗಳು ಆಗಮಿಸಿದ್ದವು. ಜಾನಪದ ಗೀತೆ, ಕರಡಿಮಜಲು, ವಿಭಿನ್ನ ಕುಣಿತ ಸೇರಿದಂತೆ ಅನೇಕ ಕಲಾತಂಡಗಳ ಪ್ರದರ್ಶನ ನರೆದಿದ್ದ ಜನರ ಮನಸೂರೆಗೊಂಡಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಉಮಾಶ್ರೀ, ನಶಿಸುತ್ತಿರೋ ಕಲೆಯನ್ನ ಉಳಿಸಿಬೆಳೆಸಿಕೊಂಡು ಹೋಗಬೇಕೆನ್ನುವ ಉದ್ದೇಶದಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಭವಿಷ್ಯದಲ್ಲಿ ಇನ್ನಷ್ಟು ಕಾರ್ಯಕ್ರಮ ಹಮ್ಮಿಕೊಂಡು ಕಲಾವಿದರನ್ನು ಆರ್ಥಿಕವಾಗಿ ಏಳಿಗೆಗೊಳಿಸುವುದೇ ನಮ್ಮ ಗುರಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಕಂಡೋರ ಹೆಂಡ್ತಿಯನ್ನು ಪಟಾಯಿಸಿದ ಪೊಲೀಸಪ್ಪ; ಇದು ರೀಲ್ಸ್ ಅಂಟಿಯ ಮೋಹದ ಕಥೆ
ಬೆಂಗಳೂರಿನಲ್ಲಿ ಜಿಮ್‌ಗೆ ಹೋದ್ರೆ, ಚಿಕನ್‌ ತಿಂದ್ರೆ ಮ್ಯಾನೇಜರ್‌ ನಗ್ತಾರೆ: NRI ಪೋಸ್ಟ್‌ನಿಂದ ಆಘಾತಕಾರಿ ಸತ್ಯ ಬಯಲು!