
ವಿಜಯಪುರ: ವಿಜಯಪುರದಲ್ಲಿ ನಡೆದ ಜಲ ಸಮಾವೇಶ ಸಮಾರೋಪ ಕಾರ್ಯಕ್ರಮದಲ್ಲಿ ಜಲ-ತಜ್ಞರು ಭಾಷಣದಲ್ಲಿ ಎಡವಟ್ಟು ಮಾಡಿ ಸರ್ಕಾರಕ್ಕೆ ಮುಜುಗರ ತಂದ ಘಟನೆ ನಡೆಯಿತು.
ವೇದಿಕೆಯಲ್ಲಿ ಸಿಎಂ ಎದುರೇ, ಸರ್ಕಾರ ಕೆರೆಗಳ ಡಿನೋಟಿಫಿಕೇಷನ್’ಗೆ ಮುಂದಾಗಿದ್ದು ಸ್ವಾಗತಾರ್ಹ ಎಂದು ಜಲ ತಜ್ಞ ರಾಜೇಂದ್ರಸಿಂಗ್ ಹೇಳಿದ್ದಾರೆ.
ರಾಜೇಂದ್ರಸಿಂಗ್ ಹೇಳಿಕೆಯಿಂದ ತಬ್ಬಿಬ್ಬಾದ ಸಿಎಂ ಸಿದ್ದರಾಮಯ್ಯ, ರಾಜೇಂದ್ರಸಿಂಗ್ ಹೇಳಿಕೆ ಸರಿಪಡಿಸಲು ಮುಂದಾದರು. ಬಳಿಕ ಬೇರೊಂದು ಮೈಕ್ ಹಿಡಿದು ಸಿಎಂ ಸಿದ್ದರಾಮಯ್ಯ ಜನರಿಗೆ ಸಮಜಾಯಿಸಿ ನೀಡಿದರು.
ರಾಜ್ಯ ಸರ್ಕಾರ ಕೆರೆಗಳನ್ನು ಡಿನೊಟಿಫೈ ಮಾಡುತ್ತದೆಯೆಂದು ಎಲ್ಲಿಯೂ ಹೇಳಿಲ್ಲ, ಮಾಧ್ಯಮಗಳಲ್ಲಿ ಬಂದ ವರದಿಯನ್ನು ರಾಜೇಂದ್ರ ಸಿಂಗ್ ಅವರು ಓದಿದ್ದಾರೆ. ಸಂಪುಟದಲ್ಲಿ ಈ ಬಗ್ಗೆ ಚರ್ಚೆ ಕೂಡ ಮಾಡಿಲ್ಲವೆಂದು ಸಿಎಂ ಸಮರ್ಥಿಸಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.