ಕಬ್ಬಿನ ಬಾಕಿ ಹಣ ನೀಡದ ಮಾಲೀಕರು ಜೈಲಿಗೆ

Published : Jul 03, 2019, 10:50 AM IST
ಕಬ್ಬಿನ ಬಾಕಿ ಹಣ ನೀಡದ ಮಾಲೀಕರು ಜೈಲಿಗೆ

ಸಾರಾಂಶ

ಕಬ್ಬಿನ ಬಾಕಿ ಹಣ ನೀಡದ ಮಾಲೀಕರ ಜೈಲಿಗೆ ಹಾಕುವ ಅಧಿಕಾರ ರಾಜ್ಯಕ್ಕಿದೆ: ಕೇಂದ್ರ| ಗ್ರಾಹಕ ವ್ಯವಹಾರ, ಆಹಾರ ಮತ್ತು ಪಡಿತರ ವಿತರಣೆ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಮಾಹಿತಿ

ನವದೆಹಲಿ[ಜು.03]: ರೈತರಿಗೆ ಕಬ್ಬಿನ ಬಾಕಿ ಹಣವನ್ನು ನೀಡಲು ವಿಫಲವಾಗುವ ಸಕ್ಕರೆ ಕಾರ್ಖಾನೆ ಮಾಲೀಕರನ್ನು ಜೈಲಿ ಹಾಕುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.

ಲೋಕಸಭೆಯಲ್ಲಿ ಈ ಹೇಳಿಕೆ ನೀಡಿದ ಗ್ರಾಹಕ ವ್ಯವಹಾರ, ಆಹಾರ ಮತ್ತು ಪಡಿತರ ವಿತರಣೆ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌, 2017-​18ರಲ್ಲಿ ಕಬ್ಬು ಬೆಳೆಗಾರರಿಗೆ ನೀಡಬೇಕಿರುವ ಬಾಕಿ ಹಣದ ಪ್ರಮಾಣ 85,179 ಕೋಟಿ ರು. ಇತ್ತು. ಈ ಪ್ರಮಾಣ ಕಬ್ಬಿನ ಬೆಳೆಯ ಋುತುವಿನ ಮುಕ್ತಾಯದ ವೇಳೆಗೆ 303 ಕೋಟಿ ರು.ಗಳಿಗೆ ಇಳಿಕೆಯಾಗಿತ್ತು.

ಪ್ರಸ್ತುತ ಋುತುವಿನಲ್ಲಿ ರೈತರಿಗೆ ಪಾವತಿಸಬೇಕಿರುವ 85,355 ಕೋಟಿ ರು. ಬಾಕಿ ಹಣದ ಪೈಕಿ 67,706 ಕೋಟಿ ರು.ಗಳನ್ನು ಈಗಾಗಲೇ ಪಾವತಿಸಲಾಗಿದೆ. ಈ ವರ್ಷ ಅಂತ್ಯದ ವೇಳೆಗೆ ರೈತರ ಎಲ್ಲಾ ಬಾಕಿ ಹಣವನ್ನು ಪಾವತಿಸುವುದನ್ನು ಖಾತರಿಪಡಿಸಿಕೊಳ್ಳಲು ಯತ್ನಿಸಲಾಗುವುದು. ಒಂದು ವೇಳೆ ಬಾಕಿ ಹಣ ಪಾವತಿಸದೇ ಇದ್ದರೆ, ಸಕ್ಕರೆ ಕಾರ್ಖಾನೆಯ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಬಾಕಿ ಹಣ ಪಾವತಿಸದ ಮಾಲೀಕರನ್ನು ಜೈಲಿಗೆ ಹಾಕುವುದಕ್ಕೂ ಅವಕಾಶವಿದೆ ಎಂದು ರಾಮ್‌ ವಿಲಾಸ್‌ ಪಾಸ್ವಾನ್‌ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಗ್ರಾಹಕರಿಗೆ ಬಂಪರ್‌ ಪ್ಲ್ಯಾನ್‌ ಘೋಷಿಸಿದ Vi: 61 ರೂಪಾಯಿಯ ಮೊಬೈಲ್‌ ರಿಚಾರ್ಜ್‌ಗೆ 25 ಸಾವಿರದ ಬೆನಿಫಿಟ್‌!