RBIನಿಂದ ಸರ್ಕಾರ ದುಡ್ಡು ಎತ್ತಿದ್ದು ಕಳ್ಳತನಕ್ಕೆ ಸಮ: ರಾಹುಲ್‌ ಕಿಡಿ

Published : Aug 28, 2019, 10:26 AM IST
RBIನಿಂದ ಸರ್ಕಾರ ದುಡ್ಡು ಎತ್ತಿದ್ದು ಕಳ್ಳತನಕ್ಕೆ ಸಮ: ರಾಹುಲ್‌ ಕಿಡಿ

ಸಾರಾಂಶ

ಆರ್‌ಬಿಐನಿಂದ ಸರ್ಕಾರ ದುಡ್ಡು ಎತ್ತಿದ್ದು ಕಳ್ಳತನಕ್ಕೆ ಸಮ: ರಾಹುಲ್‌| ಗುಂಡೇಟಿನ ಗಾಯಕ್ಕಾಗಿ ಬ್ಯಾಂಡ್‌ ಏಡ್‌ ಕದ್ದಂತೆ| ಕಾಂಗ್ರೆಸ್‌ ಅಧ್ಯಕ್ಷ ಹಿಗ್ಗಾಮುಗ್ಗಾ ವಾಗ್ದಾಳಿ

ನವದೆಹಲಿ[ಆ.28]: ಆರ್ಥಿಕತೆಗೆ ಉತ್ತೇಜನ ನೀಡುವ ಸಲುವಾಗಿ ಭಾರತೀಯ ರಿಸವ್‌ರ್‍ ಬ್ಯಾಂಕ್‌ (ಆರ್‌ಬಿಐ)ನಲ್ಲಿರುವ 1.76 ಲಕ್ಷ ಕೋಟಿ ರು. ಹೆಚ್ಚುವರಿ ನಿಧಿಯನ್ನು ಪಡೆಯುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹರಿಹಾಯ್ದಿದ್ದಾರೆ. ಅದನ್ನು ಕಳ್ಳತನಕ್ಕೆ ಹೋಲಿಸಿ ಟ್ವೀಟ್‌ ಮಾಡಿದ್ದಾರೆ.

ಸ್ವಯಂ ಸೃಷ್ಟಿಸಿದ ಆರ್ಥಿಕ ವಿಪತ್ತನ್ನು ಹೇಗೆ ಬಗೆಹರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಗೊತ್ತಾಗುತ್ತಿಲ್ಲ. ರಿಸವ್‌ರ್‍ ಬ್ಯಾಂಕ್‌ನಿಂದ ಹಣ ಕದಿಯುವುದು ಕೆಲಸಕ್ಕೆ ಬರುವುದಿಲ್ಲ. ಇದೊಂದು ರೀತಿ ಗುಂಡೇಟಿನಿಂದ ಆದ ಗಾಯಕ್ಕೆ ಔಷಧ ಅಂಗಡಿಯಿಂದ ಬ್ಯಾಂಡ್‌ ಏಡ್‌ ಕದ್ದು ಅಂಟಿಸಿದಂತೆ ಎಂದು ಕಿಡಿಕಾರಿದ್ದಾರೆ.

ಆರ್‌ಬಿಐನ 1.76 ಲಕ್ಷ ಕೋಟಿ ಕೇಂದ್ರಕ್ಕೆ!

ಮತ್ತೊಂದೆಡೆ ಮೋದಿ ಸರ್ಕಾರ ಆರ್‌ಬಿಐ (ರಿಸವ್‌ರ್‍ ಬ್ಯಾಂಕ್‌)ನಲ್ಲಿರುವ ಮೊದಲ ಅಕ್ಷರ ‘ಆರ್‌’ ಅನ್ನು ‘ರಿಸವ್‌ರ್‍’ ಬದಲು ‘ರಾರ‍ಯವೇಜ್ಡ್‌’ (ಹಾಳು ಮಾಡು) ಎಂದು ಪರಿವರ್ತಿಸಿದೆ ಎಂದು ಕಾಂಗ್ರೆಸ್‌ ಮುಖ್ಯ ವಕ್ತಾರ ರಣದೀಪ್‌ ಸುರ್ಜೇವಾಲಾ ಕಿಡಿಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!