
ಬೆಂಗಳೂರು (ಅ.18): ಬೆಂಗಳೂರಿನಲ್ಲಿ ಬಿಡಿಎ ಉದ್ದೇಶಿಸಿರುವ ಉಕ್ಕಿನ ಮೇಲ್ಸೇತುವೆ ಭಾರೀ ವಿವಾದ ಎಬ್ಬಿಸಿದೆ. ಚಾಲುಕ್ಯ ಸರ್ಕಲ್ನಿಂದ ಹೆಬ್ಬಾಳದವರೆಗೂ ಸ್ಟೀಲ್ ಬ್ರಿಡ್ಜ್ ನಿರ್ಮಾಣವಾಗಲಿದೆ.
ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಏರ್’ಪೋರ್ಟ್ ರಸ್ತೆಯಲ್ಲಿ ಸಮೀಕ್ಷೆ ನಡೆಸಿದರು. ಬಳಿಕ ಮಾತಾಡಿದ ಅವರು, ಸ್ಟೀಲ್ ಬ್ರಿಡ್ಜ್ ನಿರ್ಮಾಣ ಯಾವುದೇ ಕಾರಣಕ್ಕೂ ನಿಲ್ಲಲ್ಲ ಎಂದು ಹೇಳಿದ್ದಾರೆ.
ಆದರೆ ಕೆಂಪೇಗೌಡ ಏರ್ಪೋರ್ಟ್ ರಸ್ತೆ ಮೇಲಿನ ಸಂಚಾರ ಒತ್ತಡ ಶಮನಕ್ಕೆ ಸರ್ಕಾರ ಮೂರು ಪರ್ಯಾಯ ರಸ್ತೆಗಳ ಅಭಿವೃದ್ಧಿಗೆ ಮುಂದಾಗಿದೆ. ಪರ್ಯಾಯ ರಸ್ತೆಗಳ ಅಭಿವೃದ್ಧಿಗೆ ಒತ್ತು ಕೊಟ್ಟಿರುವ ಸರ್ಕಾರ 300 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೊದಲ ಪರ್ಯಾಯ ಮಾರ್ಗ ಹೆಣ್ಣೂರು ಮುಖ್ಯರಸ್ತೆಯಿಂದ ಬಾಗಲೂರು ವೃತ್ತ - ಬಂಡಿಕೊಡಿಗೇಹಳ್ಳಿ - ಮೈಲನಹಳ್ಳಿ ಮೂಲಕ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.