
ತೂತ್ತುಕುಡಿ[ಡಿ.23]: ಇಲ್ಲಿನ ಸ್ಟರ್ಲೈಟ್ ತಾಮ್ರ ಸಂಸ್ಕರಣ ಘಟಕ ವಿಸ್ತರಣೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಗುಂಡಿಗೆ ಬಲಿಯಾದ 13 ಜನರ ಪೈಕಿ, 12 ಜನರ ತಲೆ, ಎದೆಯಲ್ಲಿ ಗುಂಡು ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಈ ಆಘಾತಕಾರಿ ಅಂಶ ಹೊರಬಿದ್ದಿದೆ.
ಗಲಭೆ ನಿಯಂತ್ರಣದ ವೇಳೆ ಪೊಲೀಸರಿಗೆ ಗುಂಡು ಹಾರಿಸುವ ಅಧಿಕಾರ ಇದೆಯಾದರೂ, ಅದು ಸೊಂಟಕ್ಕಿಂತ ಕೆಳಗೆ ಮಾತ್ರ ಹಾರಿಸಬೇಕು. ಆದರೆ ಸ್ಟರ್ಲೈಟ್ ಹಿಂಸಾಚಾರದ ವೇಳೆ ಸಾವನ್ನಪ್ಪಿದ 13 ಜನರ ಪೈಕಿ 12 ಜನರ ಎದೆ ಮತ್ತು ಹಣೆಯಲ್ಲಿ ಗುಂಡು ಪತ್ತೆಯಾಗಿರುವುದು ಹಾಗೂ ಇನ್ನೊಬ್ಬರ ತಲೆಗೆ ಹಿಂಭಾಗದಿಂದ ಅತ್ಯಂತ ಸಮೀಪದಿಂದ ಗುಂಡು ಹಾರಿಸಿರುವುದು ಸಾಕಷ್ಟುಅನುಮಾನಗಳಿಗೆ ಕಾರಣವಾಗಿದೆ.
ಪ್ರಕರಣ ಕುರಿತು ಈಗಾಗಲೇ ಸಿಬಿಐ ತನಿಖೆ ನಡೆಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ