ಗಣೇಶ ವಿಸರ್ಜನೆ: ಡಿಜೆ ಬಂದ್ ಮಾಡಿಸಿದ ಪೊಲೀಸರ ಮೇಲೆ ಕಲ್ಲು ತೂರಾಟ

Published : Aug 28, 2017, 11:17 AM ISTUpdated : Apr 11, 2018, 01:01 PM IST
ಗಣೇಶ ವಿಸರ್ಜನೆ: ಡಿಜೆ ಬಂದ್ ಮಾಡಿಸಿದ ಪೊಲೀಸರ ಮೇಲೆ ಕಲ್ಲು ತೂರಾಟ

ಸಾರಾಂಶ

ಡಿಜೆ ಹಚ್ಚುವ ವಿಚಾರಕ್ಕೆ ನಡೆದ ವಾಗ್ವಾದದಲ್ಲಿ ಕೊನೆಗೆ ಪೊಲೀಸರೇ ಗಣೇಶನ ವಿಸರ್ಜನೆ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ನಗರದ ಕಿನ್ನಾಳ ರಸ್ತೆಯ ಜಿ.ಎಚ್ ಪಾಟೀಲ್​ ನಗರದ ಏಕದಂತ ಮಿತ್ರ ಮಂಡಳಿ ಯುವಕರು ಅಶೋಕ ವೃತ್ತದ ಮಾರ್ಗವಾಗಿ ಗಣೇಶ ವಿಸರ್ಜನೆಗೆ ಹೊರಟಿದ್ದರು.ಈ ವೇಳೆ ಪೊಲೀಸರು ಡಿಜೆ ಹಚ್ಚಿದ್ದನ್ನು ಪ್ರಶ್ನಿಸಿ ಬಂದ್ ಮಾಡಿದ್ದಾರೆ.

ಕೊಪ್ಪಳ: ಡಿಜೆ ಹಚ್ಚುವ ವಿಚಾರಕ್ಕೆ ನಡೆದ ವಾಗ್ವಾದದಲ್ಲಿ ಕೊನೆಗೆ ಪೊಲೀಸರೇ ಗಣೇಶನ ವಿಸರ್ಜನೆ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ನಗರದ ಕಿನ್ನಾಳ ರಸ್ತೆಯ ಜಿ.ಎಚ್ ಪಾಟೀಲ್​ ನಗರದ ಏಕದಂತ ಮಿತ್ರ ಮಂಡಳಿ ಯುವಕರು ಅಶೋಕ ವೃತ್ತದ ಮಾರ್ಗವಾಗಿ ಗಣೇಶ ವಿಸರ್ಜನೆಗೆ ಹೊರಟಿದ್ದರು.ಈ ವೇಳೆ ಪೊಲೀಸರು ಡಿಜೆ ಹಚ್ಚಿದ್ದನ್ನು ಪ್ರಶ್ನಿಸಿ ಬಂದ್ ಮಾಡಿದ್ದಾರೆ.

ಇದನ್ನ ವಿರೋಧಿಸಿ ಯುವಕರು ಪೊಲೀಸರ ವಿರುದ್ಧವೇ ಪ್ರತಿಭಟನೆ ಮಾಡಿದ್ದಾರೆ.

ಸುಮಾರು ಎರಡು ಗಂಟೆಗಳ ಕಾಲ ಪ್ರತಿಭಟನೆಯಿಂದ ಅಶೋಕ ವೃತ್ತದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಪ್ರತಿಭಟನಾಕಾರರು ಡಿವೈಎಸ್ಪಿ ಮಾತಿಗೂ ಬಗ್ಗದ ಹಿನ್ನಲೆ ಕೊನೆಗೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ ಘಟನಾ ಸ್ಥಳಕ್ಕೆ ಬರಬೇಕಾಯಿತು. ಎಸ್ಪಿ ಬರುತ್ತಿದ್ದಂತೆ ಪೊಲೀಸರ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.

ಕೊನೆಗೆ ಎಸ್ಪಿ ತಮ್ಮ ಪೊಲೀಸ ಸಿಬ್ಬಂದಿಯಿಂದಲೇ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ