
ಕ್ಯಾನ್'ಬೆರಾ(ಅ.08): ಭಾರತೀಯ ಉದ್ಯಮಿ ಗೌತಮ್ ಅದಾನಿಗೆ ಸೇರಿದ ಕಂಪನಿಯ ಪ್ರಸ್ತಾಪಿತ ಕಾರ್ಮೈಕಲ್ ಕಲ್ಲಿದ್ದಲು ಗಣಿಗಾರಿಕೆ ವಿರೋಧಿಸಿ ಆಸ್ಟ್ರೇಲಿಯಾದ್ಯಂತ ಭಾರೀ ಪ್ರತಿಭಟನೆಗಳು ನಡೆದಿವೆ.
ಸಿಡ್ನಿ, ಬ್ರಿಸ್ಬೇನ್, ಮೆಲ್ಬೊರ್ನ್ ಸೇರಿದಂತೆ ಹಲವು ನಗರಗಳಲ್ಲಿ ಯೋಜನೆ ವಿರುದ್ಧ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟಿಸಿದ್ದಾರೆ.
ಸ್ಥಳೀಯರಿಗೆ ಸಾಕಷ್ಟು ಉದ್ಯೋಗ ನೀಡುವ ಭರವಸೆ ಅದಾನಿ ನೀಡಿದ್ದಾರಾದರೂ, ಯೋಜನೆಯಿಂದ ಜಾಗತಿಕ ಹವಾಮಾನ ಬದಲಾವಣೆಗೆ ಕಾರಣವಾಗುತ್ತದೆ ಮತ್ತು ಆಸ್ಟ್ರೇಲಿಯಾದ ಕರಾವಳಿ ತೀರಕ್ಕೆ ಹಾನಿಯಾಗುತ್ತದೆ ಎಂದು ಪ್ರತಿಭಟನಕಾರರು ಆಪಾದಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.