ಸಾಲ ಮರುಪಾವತಿಗೆ ಬ್ಯಾಂಕುಗಳು ರೈತರ ಒತ್ತಾಯಿಸುಂತಿಲ್ಲ: ಸುಪ್ರೀಂ

Published : Jul 08, 2017, 12:17 AM ISTUpdated : Apr 11, 2018, 12:47 PM IST
ಸಾಲ ಮರುಪಾವತಿಗೆ ಬ್ಯಾಂಕುಗಳು ರೈತರ ಒತ್ತಾಯಿಸುಂತಿಲ್ಲ: ಸುಪ್ರೀಂ

ಸಾರಾಂಶ

ಅಲ್ಲದೆ, ರೈತರ ಆತ್ಮಹತ್ಯೆಗಳನ್ನು ತಡೆಯುವುದು ಸರ್ಕಾರದ ಜವಾಬ್ದಾರಿಯಾಗಬೇಕೇ ಹೊರತು ಪರಿಹಾರ ಹಂಚಿಕೆ ಮಾಡುವುದಲ್ಲ ಎಂದು ಕೇಂದ್ರಕ್ಕೆ ಸುಪ್ರೀಂ ಚಾಟಿ ಬೀಸಿದೆ.

ನವದೆಹಲಿ(ಜು.08): ರೈತರು ಬೆಳೆ ನಷ್ಟ ಅನುಭವಿಸಿದ ಸಂದರ್ಭದಲ್ಲಿ ಬ್ಯಾಂಕ್‌ಗಳು ಅಥವಾ ಇನ್ನಿತರ ಯಾವುದೇ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿ ಮಾಡುವಂತೆ ಬಲವಂತಪಡಿಸಬಾರದು. ಇಂಥ ಸಂದರ್ಭದಲ್ಲಿ ಸರ್ಕಾರಗಳು ರೈತರ ನೆರವಿಗೆ ಧಾವಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಅಲ್ಲದೆ, ರೈತರ ಆತ್ಮಹತ್ಯೆಗಳನ್ನು ತಡೆಯುವುದು ಸರ್ಕಾರದ ಜವಾಬ್ದಾರಿಯಾಗಬೇಕೇ ಹೊರತು ಪರಿಹಾರ ಹಂಚಿಕೆ ಮಾಡುವುದಲ್ಲ ಎಂದು ಕೇಂದ್ರಕ್ಕೆ ಸುಪ್ರೀಂ ಚಾಟಿ ಬೀಸಿದೆ.

ಈ ಬಗ್ಗೆ ತಮಿಳುನಾಡು ರೈತರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಮತ್ತು ಎ.ಎಂ.ಖಾನ್ವಿಲ್ಕರ್ ನೇತೃತ್ವದ ಪೀಠ, ‘ಬೆಳೆ ನಷ್ಟ ಅನುಭವಿಸಿದ ವೇಳೆ ಸಾಲ ಮರು ಪಾವತಿ ವಿಚಾರದಲ್ಲಿ ಬ್ಯಾಂಕ್‌ಗಳು ರೈತರ ವಿರುದ್ಧ ಕ್ರಮ ಕೈಗೊಳ್ಳಬಾರದು. ಒಂದು ವೇಳೆ ಬ್ಯಾಂಕ್‌ಗಳು ರೈತರ ವಿರುದ್ಧ ಕ್ರಮಕ್ಕೆ ಮುಂದಾದಾಗ ಸರ್ಕಾರ ಕಾರ್ಯಪ್ರವೃತ್ತವಾಗಬೇಕು’ ಎಂದು ಹೇಳಿದೆ.

ರೈತರ ಬೆಳೆಗಳನ್ನು ಕನಿಷ್ಠ ಬೆಲೆಗೆ ಖರೀದಿಸುವ ಮಧ್ಯವರ್ತಿಗಳನ್ನು ತೊಲಗಿಸಲು ಸರ್ಕಾರ ಆಡಳಿತಾತ್ಮಕ ಕ್ರಮ ಕೈಗೊಂಡು, ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ ಖರೀದಿಸಬೇಕು ಎಂದು ಸುಪ್ರೀಂ ಹೇಳಿದೆ. ಅಲ್ಲದೆ, ಈ ಬಗ್ಗೆ ವಿಸ್ತೃತ ಪ್ರತಿಕ್ರಿಯೆ ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಸೂಚಿಸಿ ಮುಂದಿನ ವಿಚಾರಣೆಯನ್ನು ಆ.4ಕ್ಕೆ ಮುಂದೂಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಳಂದ ಮತಚೋರಿ ಆರೋಪ ರಾಜಕೀಯ ಪ್ರೇರಿತ: ಎಸ್‌ಐಟಿ ಕ್ರಮದ ವಿರುದ್ಧ ಸುಭಾಷ್ ಗುತ್ತೇದಾರ್ ಕಿಡಿ
ಪಶ್ಚಿಮ ಬಂಗಾಳದಲ್ಲಿ 1 ಕೋಟಿ ನಕಲಿ ಮತದಾರರಿಗೆ ಕೊಕ್ ಸಾಧ್ಯತೆ