
ನವದೆಹಲಿ (ಮಾ.15): ಇವಿಎಂ ಯಂತ್ರಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ, ಸೋಲನ್ನು ಒಪ್ಪಿಕೊಳ್ಳಿ. ಸುಮ್ಮನೆ ಆರೋಪ ಮಾಡಬೇಡಿ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಸೋತ ಪಕ್ಷ ಯಾವಾಗಲೂ ತಮ್ಮ ಸೋಲಿಗೆ ಎವಿಎಂ ಯಂತ್ರಗಳನ್ನು ದೂಷಿಸುತ್ತಾರೆ. ಒಂದುವೇಳೆ ನೀವು ಗೆದ್ದರೆ ಇವಿಎಂ ಯಂತ್ರಗಳು ಸರಿಯಾಗಿವೆ. ಸೋತರೆ ಯಂತ್ರಗಳು ದೋಷಯುಕ್ತವಾಗಿವೆ ಎಂದು ಆರೋಪಿಸುತ್ತೀರಿ ಎಂದು ನಾಯ್ಡು ಹೇಳಿದ್ದಾರೆ.
ಜನರು ನಿಮ್ಮನ್ನು ತಿರಸ್ಕರಿಸಿದ್ದಾರೆ. ಹಾಗಾಗಿ ನೀವು ಇವಿಎಂ ನ ದೂಷಿಸುವ ಬದಲು ಸೋಲನ್ನು ಒಪ್ಪಿಕೊಳ್ಳಬೇಕು. ಭಾರತದಲ್ಲಿ ನಡೆಯುವ ಮತದಾನ ಪ್ರಕ್ರಿಯೆ ಒಪ್ಪತಕ್ಕ ವ್ಯವಸ್ಥೆಯಾಗಿದೆ ಎಂದು ನಾಯ್ಡು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.