
ವಾರಾಣಸಿ(ಮಾ. 22): ಬರುವ ಶುಕ್ರವಾರದಂದು ಪೂರ್ವಾಂಚಲದಲ್ಲಿ ಭಾರೀ ದಾಳಿ ನಡೆಯಲಿದ್ದು, ತಾಕತ್ತಿದ್ದರೆ ತಡೆಯಿರಿ ಎಂದು ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಎಚ್ಚರಿಕೆ ನೀಡಿರುವ ಪತ್ರವೊಂದು ಪತ್ತೆಯಾಗಿದೆ. ಇಲ್ಲಿಯ ಮಿರ್ಜಾಮುರದ್ ಪ್ರದೇಶದಲ್ಲಿ ಪತ್ತೆಯಾಗಿರುವ ಈ ಪತ್ರದಲ್ಲಿ, "ಮಾರ್ಚ್ 24ರಂದು ಪೂರ್ವಾಂಚಲದಲ್ಲಿ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸುತ್ತೇವೆ. ತಡೆಯಿರಿ" ಎಂದು ಬರೆಯಲಾಗಿದೆ.
ಪೂರ್ವಾಂಚಲವು ಉತ್ತರಪ್ರದೇಶದ ಪೂರ್ವಭಾಗದಲ್ಲಿದೆ. ಸಿಎಂ ಯೋಗಿ ಆದಿತ್ಯನಾಥ್ ಅವರ ಪ್ರಭಾವ ಇಲ್ಲಿ ಅಧಿಕವಾಗಿದೆ. ಪತ್ರ ಸಿಕ್ಕಿರುವ ವಾರಾಣಸಿಯು ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾಗಿರುವುದೂ ಗಮನಾರ್ಹ.
ಅನಾಮಧೇಯರು ಬರೆದಿರುವ ಈ ಪತ್ರದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷವಾಕ್ಯವಿದೆ. ಉತ್ತರಪ್ರದೇಶದ ಪೊಲೀಸರು ಮತ್ತು ದೇಶದ ಗುಪ್ತಚರ ಸಂಸ್ಥೆಗಳು ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸ್ಥಳೀಯ ಪತ್ರಿಕೆ ಅಮರ್ ಉಜಾಲಾದಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.