ತ.ನಾ ಸಿಎಂ ಆಗಿ ಶಶಿಕಲಾ ಪ್ರಮಾಣವಚನ ಸ್ವೀಕಾರಕ್ಕೆ ತಡೆ ಕೋರಿ ಪಿಐಎಲ್ ಸಲ್ಲಿಕೆ

Published : Feb 06, 2017, 03:33 PM ISTUpdated : Apr 11, 2018, 12:46 PM IST
ತ.ನಾ ಸಿಎಂ ಆಗಿ ಶಶಿಕಲಾ ಪ್ರಮಾಣವಚನ ಸ್ವೀಕಾರಕ್ಕೆ ತಡೆ ಕೋರಿ ಪಿಐಎಲ್ ಸಲ್ಲಿಕೆ

ಸಾರಾಂಶ

ಎಐಡಿಎಂಕೆ ಮುಖ್ಯಸ್ಥೆ ವಿ.ಕೆ ಶಶಿಕಲಾರವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸುವುದನ್ನು ತಡೆಹಿಡಿಯಬೇಕೆಂದು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ನವದೆಹಲಿ (ಫೆ.06): ಎಐಡಿಎಂಕೆ ಮುಖ್ಯಸ್ಥೆ ವಿ.ಕೆ ಶಶಿಕಲಾರವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸುವುದನ್ನು ತಡೆಹಿಡಿಯಬೇಕೆಂದು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಹಾಗೂ ಶಶಿಕಲಾ ಅಕ್ರಮ ಆಸ್ತಿ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಕರಣದ ತೀರ್ಪನ್ನು ಸುಪ್ರೀಂಕೋರ್ಟ್ ವಾರದೊಳಗೆ ನೀಡಲಿರುವ ಹಿನ್ನೆಲೆಯಲ್ಲಿ ಸತ್ತ ಪಂಚಾಯತ್ ಇಯಾಕ್ಕಂ ಎನ್ನುವ ಎನ್ ಜಿಓ ಜನರಲ್ ಸೆಕ್ರೆಟರಿ ಸೆಂಥಿಲ್ ಕುಮಾರ್ ಎನ್ನುವವರು ಪಿಐಎಲ್ ಸಲ್ಲಿಸಿದ್ದಾರೆ.

ನಾಳೆ ವಿಚಾರಣೆ ನಡೆಯಲಿರುವ ಸಾಧ್ಯತೆಯಿದೆ. ಒಂದು ವೇಳೆ ಶಶಿಕಲಾ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿ, ರಾಜಿನಾಮೆ ನೀಡಲು ಒತ್ತಾಯಿಸಿದರೆ ತಮಿಳುನಾಡಿನಾದ್ಯಂತ ಸಂಘರ್ಷಕ್ಕೆ ಕಾರಣವಾಗಬಹುದು. ಹಾಗಾಗಿ ಪ್ರಮಾಣ ವಚನಕ್ಕೆ ತಡೆನೀಡಿ ಎಂದು ಸೆಂಥಿಲ್ ಕುಮಾರ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ