ಕರ್ನಾಟಕದಿಂದ ಗೋವಾಗೆ ದಿನಸಿ, ತರಕಾರಿ ಪೂರೈಕೆ ಬಂದ್

Published : Feb 01, 2018, 10:14 AM ISTUpdated : Apr 11, 2018, 12:59 PM IST
ಕರ್ನಾಟಕದಿಂದ ಗೋವಾಗೆ ದಿನಸಿ, ತರಕಾರಿ ಪೂರೈಕೆ ಬಂದ್

ಸಾರಾಂಶ

ಮಹದಾಯಿ ನೀರು ಹಂಚಿಕೆ ಸಂಬಂಧ ರೈತ ಮತ್ತು ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ರಾಜ್ಯ ಎಪಿಎಂಸಿ ಯಾರ್ಡ್‌ಗಳ ಗುಮಾಸ್ತರು ಹಾಗೂ ಹಮಾಲಿಗಳ ಸಂಘ ಬೆಂಬಲ ಸೂಚಿಸಿದೆ.

ಬೆಂಗಳೂರು: ಮಹದಾಯಿ ನೀರು ಹಂಚಿಕೆ ಸಂಬಂಧ ರೈತ ಮತ್ತು ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ರಾಜ್ಯ ಎಪಿಎಂಸಿ ಯಾರ್ಡ್‌ಗಳ ಗುಮಾಸ್ತರು ಹಾಗೂ ಹಮಾಲಿಗಳ ಸಂಘ ಬೆಂಬಲ ಸೂಚಿಸಿದೆ. ಅಲ್ಲದೆ, ಕರ್ನಾಟಕದಿಂದ ಗೋವಾಕ್ಕೆ ತರಕಾರಿ ಹಾಗೂ ದಿನಸಿ ಪದಾರ್ಥಗಳನ್ನು ಹೊತ್ತೊಯ್ಯುವ ಲಾರಿಗಳಿಗೆ ಲೋಡ್ ಮಾಡುವುದನ್ನು 4 ದಿನಗಳಿಂದ ಸ್ಥಗಿತಗೊಳಿಸಲಾಗಿದೆ.

ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಕಾರವಾರ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಯಾವುದೇ ಎಪಿಎಂಸಿ ಯಿಂದ  ಗೋವಾಕ್ಕೆ ಹೋಗುವ ಲಾರಿಗಳಿಗೆ ಲೋಡ್ ಮಾಡದಂತೆ ಸಂಘದ ಸದಸ್ಯರಿಗೆ ಸೂಚಿಸಿರುವುದಾಗಿ ಸಂಘದ ಅಧ್ಯಕ್ಷ ಎಚ್.ವಿ.ಪರಮೇಶ್ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ. ಕರ್ನಾಟಕದಿಂದ ಪ್ರತಿದಿನ 4 ಲಾರಿ ತರಕಾರಿ ಹಾಗೂ 6 ಲಾರಿ ದಿನಸಿ ಹೋಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಣ ಸುಲಿಗೆ ಮಾಡ್ತಿದ್ದ ನಕಲಿ ಪಿಎಸ್ಐ ಬಂಧನ: ಪೊಲೀಸ್‌ ಕನಸು ಈಡೇರದಾಗ ಸುಲಿಗೆ ಕೃತ್ಯ
ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆ ಶೀಘ್ರ ಸಂಚಾರಕ್ಕೆ ಮುಕ್ತ: 30 ಕೇಬಲ್‌ ಅಳವಡಿಕೆ ಮಾತ್ರ ಬಾಕಿ