
ನವದೆಹಲಿ(ಜು.3): ಮಾನಸ ಸರೋವರ ಯಾತ್ರೆ ಸಂದರ್ಭದಲ್ಲಿ ವ್ಯಕ್ತಿಯೋರ್ವ ನಿಜವಾದ ಹನುಮಂತನ ಫೋಟೋ ಕ್ಲಿಕ್ಕಿಸಿದ್ದಾನೆ ಎನ್ನಲಾಗಿದ್ದು, ಫೋಟೋ ಕ್ಲಿಕ್ಕಿಸಿದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಮೂವರು ಗೆಳೆಯರು ಸೇರಿ ಮಾನಸ ಸರೋವರ ಯಾತ್ರೆಗೆ ತೆರಳಿದ್ದರು. ಇದರಲ್ಲಿ ಓರ್ವ ಹನುಮಂತನ ಭಕ್ತನಾಗಿದ್ದು, ಹನುಮಂತನ ಅಸಲಿ ರೂಪ ನೋಡಬೇಕೆಂಬುದು ಆತನ ಆಸೆಯಾಗಿತ್ತು.
ಅದೇ ರೀತಿ ಮಾನಸ ಸರೋವರ ಯಾತ್ರೆ ವೇಳೆ ಈ ವ್ಯಕ್ತಿಗೆ ಅಸಲಿ ಹನುಮಂತನ ದರ್ಶನವಾಗಿದ್ದು, ಆತ ಕೂಡಲೇ ತನ್ನ ಮೊಬೈಲ್ ನಲ್ಲಿ ಫೋಟೋ ಕ್ಲಿಕ್ಕಿಸಿದ್ದಾನೆ. ಆದರೆ ಫೋಟೋ ಕ್ಲಿಕ್ಕಿಸಿದ ಮರುಕ್ಷಣವೇ ಆ ವ್ಯಕ್ತಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಮಾನಸ ಸರೋವರ ಯಾತ್ರೆ ಸಂದರ್ಭದಲ್ಲಿ ಅತ್ಯಂತ ವೇಗವಾಗಿ ಹಿಮಾಲಯದತ್ತ ಹೋಗುತ್ತಿದ್ದ ಆಕೃತಿಯೊಂದನ್ನು ಬೆನ್ನತ್ತಿ, ನಂತರ ಗುಹೆಯೊಂದರಲ್ಲಿ ಅವಿತಿದ್ದ ಈ ಮಂಗನ ಫೋಟೋ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
ಆದರೆ ಈ ಫೋಟೋ ಕುರಿತ ಸತ್ಯಾಸತ್ಯತೆ ತಿಳಿಯಲು ಫೋಟೋ ಕ್ಲಿಕ್ಕಿಸಿದ ವ್ಯಕ್ತಿ ಸಾವನ್ನಪ್ಪಿರುವುದು ಕಗ್ಗಂಟಾಗಿ ಪರಿಣಮಿಸಿದೆ. ಮೂವರೂ ಯುವಕರು ರಾಮಾಯಣ ಓದುತ್ತಿದ್ದ ಸಂದರ್ಭದಲ್ಲಿ ನಿಜವಾದ ಹನುಮಂತನ ದರ್ಶನವಾಗಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.