
ಬೆಂಗಳೂರು (ಮಾ. 26): ಈಗಾಗಲೇ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಮೌಲ್ಯಮಾಪನಕ್ಕೆ ಗೈರು ಹಾಜರಾಗುವ ಉಪನ್ಯಾಸಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
ಮಾ.23ರಂದು ಮೌಲ್ಯಮಾಪನ ಪ್ರಕ್ರಿಯೆ ಆರಂಭಗೊಂಡಿದೆ. ಒಟ್ಟಾರೆ 18,346 ಮೌಲ್ಯಮಾಪಕರ ಪೈಕಿ 11,817 ಮಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. 6,527 ಉಪನ್ಯಾಸಕರು ಗೈರು ಹಾಜರಾಗಿರುವುದು ಇಲಾಖೆ ಗಮನಕ್ಕೆ ಬಂದಿದೆ.
ಈವರೆಗೆ ಕರ್ತವ್ಯಕ್ಕೆ ಹಾಜರಾಗದ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ಮಂಗಳವಾರ ಮೌಲ್ಯಮಾಪನ ಕೇಂದ್ರಗಳಿಗೆ ತಪ್ಪದೇ ಹಾಜರಾಗುವಂತೆ ಸೂಚನೆ ನೀಡಿದೆ. ಒಂದು ವೇಳೆ ಮಂಗಳವಾರವೂ ಗೈರಾದರೆ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪಿಯು ಇಲಾಖೆ ನಿರ್ದೇಶಕ ಪಿ.ಸಿ. ಜಾಫರ್ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.