ಚುನಾವಣಾ ಹೊಸ್ತಿಲಲ್ಲೇ ಕೈ ನಾಯಕರ ಫೈಟ್

Published : Nov 02, 2018, 01:45 PM IST
ಚುನಾವಣಾ ಹೊಸ್ತಿಲಲ್ಲೇ ಕೈ ನಾಯಕರ ಫೈಟ್

ಸಾರಾಂಶ

ಚುನಾವಣಾ ಹೊಸ್ತಿಲಲ್ಲೇ ಕಾಂಗ್ರೆಸಿಗೇ ಶಾಕ್ ಎದುರಾಗಿದೆ. ಇಬ್ಬರು ನಾಯಕರ ನಡುವಿನ ಫೈಟ್ ತಲೆ ನೋವು ತಂದಿಟ್ಟಿದೆ. ಚುನಾವಣಾ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಆರಂಭವಾದ ಈ ವಾಗ್ಯುದ್ದ ಇದೀಗ ತಾರಕಕ್ಕೆ ಏರುವ ಲಕ್ಷಣ ಕಂಡು ಬಂದಿದೆ. 

ನವದೆಹಲಿ :  ಇನ್ನೇನು ಮಧ್ಯ ಪ್ರದೇಶ ಚುನಾವಣೆಗೆ ಒಂದು ತಿಂಗಳಷ್ಟೆ ಬಾಕಿ ಉಳಿದಿದ್ದು ಇದೇ ವೇಳೆ ಕಾಂಗ್ರೆಸ್ ಮುಖಂಡರ ನಡುವೆ ವಾರ್ ಆರಂಭವಾಗಿದೆ. 

ಕಾಂಗ್ರೆಸ್ ಹಿರಿಯ ಮುಖಂಡರಾದ ದಿಗ್ವಿಜಯ್ ಸಿಂಗ್ ಹಾಗೂ ಜ್ಯೋತಿರಾದಿತ್ಯ ಸಿಂಧ್ಯಾ ನಡುವೆ ವೈಮನಸ್ಸು ಶುರುವಾಗಿದೆ. 

ಈ ವೈಮನಸ್ಸು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣಾ ಸಮಿತಿ ಸಭೆ ವೇಳೆ ಸ್ಥಾನಗಳ ಹಂಚಿಕೆ ವೇಳೆ ಆರಂಭವಾಗಿದ್ದು ಈ ನಿಟ್ಟಿನಲ್ಲಿ ಇತರೆ ಹಿರಿಯ ನಾಯಕರು ಮಧ್ಯ ಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಸೂಚನೆ ನಿಡಿದ್ದಾರೆ. 

ಈ ಸಮಸ್ಯೆ ಬಗೆಹರಿಸಲು ಅಶೋಕ್ ಗೆಹ್ಲೋಟ್, ಅಹಮದ್ ಪಟೇಲ್, ಎಂ ವೀರಪ್ಪ ಮೋಯ್ಲಿ ಅವರಿಗೆ ರಾಹುಲ್ ಗಾಂಧಿ ಜವಾಬ್ದಾರಿ ನೀಡಿದ್ದಾರೆ. 

ಈ ನಿಟ್ಟಿನಲ್ಲಿ ಇನ್ನೂ ಕೂಡ ಕಾಂಗ್ರೆಸ್ ಮಧ್ಯ ಪ್ರದೇಶದಲ್ಲಿ ಯಾವುದೇ ಅಭ್ಯರ್ಥಿಯನ್ನೂ ಕೂಡ ಘೋಷಣೆ ಮಾಡಿಲ್ಲ.

ತಮ್ಮ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಬೇಕು ಎಂದು ಆರಂಭವಾದ ಈ ವೈಮನಸ್ಸು ಇದೀಗ ತಾರಕಕ್ಕೆ ಏರಿದ್ದು ಚುನಾವಣೆ ಹೊಸ್ತಿಲಿನಲ್ಲೇ ಕಾಂಗ್ರೆಸ್ ಗೆ ತಲೆ ನೋವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!