ನಾವು ಜನಾದೇಶವನ್ನು ಗೌರವಿಸುತ್ತೇವೆ. ಚುನಾವಣೆಗಾಗಿ ಕಠಿಣ ಪರಿಶ್ರಮ ಪಟ್ಟ ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದಗಳು, ನಮ್ಮ ಹೋರಾಟ ಮುಂದುವರೆಯಲಿದೆ, ಎಂದು ಕೇಜ್ರಿವಾಲ್ ಹೇಳಿದ್ದಾರೆ.
ನವದೆಹಲಿ (ಮಾ.11): ಪಂಚರಾಜ್ಯ ವಿಧಾನಸಭೆ ಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷವು ನಿರೀಕ್ಷಿತ ಯಶಸ್ಸು ಸಾಧಿಸುವಲ್ಲಿ ವಿಫಲವಾಗಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಅರವಿಂದ ಕೇಜ್ರಿವಾಲ್, ಜನಾದೇಶವನ್ನು ಗೌರವಿಸುವುದಾಗಿ ಹೇಳಿದ್ದಾರೆ.
ನಾವು ಜನಾದೇಶವನ್ನು ಗೌರವಿಸುತ್ತೇವೆ. ಚುನಾವಣೆಗಾಗಿ ಕಠಿಣ ಪರಿಶ್ರಮ ಪಟ್ಟ ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದಗಳು, ನಮ್ಮ ಹೋರಾಟ ಮುಂದುವರೆಯಲಿದೆ, ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಪಂಜಾಬ್ ಹಾಗೂ ಗೋವಾದಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷವು ಉತ್ತಮ ಸಾಧನೆ ಮಾಡಬಹುದೆಂದು ಊಹಿಸಲಾಗಿತ್ತು.