ಪ್ರಿಯಕರನ ಅಂತ್ಯಸಂಸ್ಕಾರಕ್ಕೆ ಹೋಗಲು ರಜೆ ಸಿಗದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

Published : Feb 09, 2017, 09:42 AM ISTUpdated : Apr 11, 2018, 12:49 PM IST
ಪ್ರಿಯಕರನ ಅಂತ್ಯಸಂಸ್ಕಾರಕ್ಕೆ ಹೋಗಲು ರಜೆ ಸಿಗದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಸಾರಾಂಶ

ಪ್ರಿಯಕರನ ಅಂತ್ಯಸಂಸ್ಕಾರಕ್ಕೆ ಹೋಗಲು ರಜೆ ಸಿಗದಿದ್ದಕ್ಕೆ ನೊಂದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ(ಫೆ.09): ಪ್ರಿಯಕರನ ಅಂತ್ಯಸಂಸ್ಕಾರಕ್ಕೆ ಹೋಗಲು ರಜೆ ಸಿಗದಿದ್ದಕ್ಕೆ ನೊಂದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಪಶ್ಚಿಮಬಂಗಾಳ ಮೂಲಕ ದೀಪಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೆಜಿಎಫ್ ನ ಆಂಡರ್ ಸನ್ ಪೇಟೆಯ ನೂರಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ದೀಪಾ ರಾತ್ರಿ ಮಲಗುವ ಕೋಣೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಪಶ್ಚಿಮ ಬಂಗಾಳದಲ್ಲಿರುವ ತನ್ನ ಪ್ರಿಯಕರ ಸಾವನ್ನಪ್ಪಿರುವ ಬಗ್ಗೆ ದೀಪಾಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಆತನ ಅಂತ್ಯಸಂಸ್ಕಾರಕ್ಕೆ ಹೋಗಲು ನಿರ್ಧರಿಸಿದ್ದ ದೀಪಾ, ಕಾಲೇಜಿನಲ್ಲಿ ರಜೆ ಕೇಳಿದ್ದಳು.

ಆದರೆ ದೀಪಾಗೆ ರಜೆ ನೀಡದಿರುವಂತೆ ದೀಪಾ ಮನೆಯವರು ಕಾಲೇಜು ಆಡಳಿತ ಮಂಡಳಿಗೆ ಮನವಿ ಮಾಡಿದ್ದರು. ಪೋಷಕರ ಮನವಿಯಂತೆ ದೀಪಾಗೆ ರಜೆ ತೆಗೆದುಕೊಳ್ಳಲು ಕಾಲೇಜಿನಲ್ಲಿ ಅನುಮತಿ ನೀಡಿರಲಿಲ್ಲ. ಇದರಿಂದ ಹತಾಶೆಗೊಂಡಿದ್ದ ದೀಪಾ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಬಗ್ಗೆ ಆಂಡರ್ ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆತಂಕಕಾರಿ ಹಂತಕ್ಕೆ ದೆಹಲಿ ಹವೆ: 430ರ ಗಡಿ ದಾಟಿದ ವಾಯು ಗುಣಮಟ್ಟ ಸೂಚ್ಯಂಕ: ವಾರದಲ್ಲಿ ಕೆಲವೇ ದಿನ ಮಕ್ಕಳಿಗೆ ಶಾಲೆ
ಈ 6 ದೇಶಗಳಲ್ಲಿ ‘ಧುರಂಧರ್’ ಬ್ಯಾನ್; ಆದ್ರೂ ಕಲೆಕ್ಷನ್‌ಗೆ ಸ್ವಲ್ಪವೂ ಹೊಡೆತವಿಲ್ಲ, ಅದು ಹೇಗೆ..!