ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಮೊಬೈಲ್ ಕೊಟ್ಟ, ಆಮೇಲೇನಾಯ್ತು ಗೊತ್ತಾ ?

Published : Sep 04, 2018, 04:25 PM ISTUpdated : Sep 09, 2018, 09:12 PM IST
ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಮೊಬೈಲ್ ಕೊಟ್ಟ, ಆಮೇಲೇನಾಯ್ತು ಗೊತ್ತಾ ?

ಸಾರಾಂಶ

ಪರೀಕ್ಷೆ ಮುಗಿಸಿ ವಾಪಸ್ ಬಂದ್ ಮೊಬೈಲ್ ಫೋನ್ ಆನ್ ಮಾಡಿದಾಗ ಪೇಟಿಎಂ ಮೂಲಕ 21,500 ರೂ. ವರ್ಗಾವಣೆಯಾಗಿರುವ ಸಂದೇಶ ಬಂದಿದೆ.

ನೋಯ್ಡಾ[ಸೆ.04]: ಇಪ್ಪತ್ತು ವರ್ಷದ ವಿದ್ಯಾರ್ಥಿಯೊಬ್ಬ ಪರೀಕ್ಷಾ ಕೊಠಡಿಗೆ ಹೋಗುವ ಮುನ್ನಾ ಸಿಗರೇಟ್ ಮಾರಾಟ ಮಾಡುವ ವ್ಯಾಪಾರಿಯೊಬ್ಬನಿಗೆ ಮೊಬೈಲ್ ಕೊಟ್ಟು 21,500 ರೂ. ಕಳೆದುಕೊಂಡಿದ್ದಾನೆ.

ರಸಲ್'ಪುರ್ ಗ್ರಾಮದ ಮೋಹಿತ್ ಚೌಹಾನ್ ಎಂಬಾತ  ಕಂಪ್ಯೂಟರ್ ಪರೀಕ್ಷೆ ಬರೆಯಲು ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿ ಸಿಗರೇಟ್ ಮಾರಾಟ ಮಾಡುವ ಅಂಗಡಿಗೆ ಕೊಟ್ಟಿದ್ದಾನೆ. ಪರೀಕ್ಷೆ ಮುಗಿಸಿ ವಾಪಸ್ ಬಂದ್ ಮೊಬೈಲ್ ಫೋನ್ ಆನ್ ಮಾಡಿದಾಗ ಪೇಟಿಎಂ ಮೂಲಕ 21,500 ರೂ. ವರ್ಗಾವಣೆಯಾಗಿರುವ ಸಂದೇಶ ಬಂದಿದೆ.

ಅನಂತರ ಅಂಗಡಿ ಮಾಲೀಕನನ್ನು ಪ್ರಶ್ನಿಸಿದಾಗ ಆತ ತನಗೇನು ಗೊತ್ತಿಲ್ಲ ಎಂದು ನುಣಚಿಕೊಂಡಿದ್ದಾನೆ. ವಿದ್ಯಾರ್ಥಿ ಪೇಟಿಎಂ ಗ್ರಾಹಕ ಸೇವೆ ಹಾಗೂ ಸೈಬರ್ ಪೊಲೀಸರಿಗೆ ದೂರನ್ನು ನೀಡಿದ್ದಾನೆ. ಹಣ ವಾಪಸ್ ನೀಡುವ ಬಗ್ಗೆ ಪೀಟಿಎಂ ಕೂಡ ಭರವಸೆ ನೀಡಿದೆ. ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪವರ್‌ ಪಾಯಿಂಟ್‌: ದ್ವೇಷ ಭಾಷಣ ಮಸೂದೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ
'ಲಕ್ಷ್ಮಿ ಹೆಬ್ಬಾಳ್ಕರ್ ಅವರೇ, ಫೆಬ್ರವರಿ-ಮಾರ್ಚ್ ಹಣ ಯಾವಾಗ ಬರುತ್ತೆ? ಸದನಕ್ಕೆ ತಪ್ಪು ಮಾಹಿತಿ ವಿರುದ್ಧ ರೊಚ್ಚಿಗೆದ್ದ ಗೃಹಲಕ್ಷ್ಮಿಯರು!