
ಮಂಡ್ಯ(ಡಿ.28): ಊಟ ಮಾಡಿ ಕೈತೊಳೆಯುತ್ತಿದ್ದಂತೆ ತಲೆಸುತ್ತಿ ಬಂದು ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ಮೃತಪಟ್ಟಿರುವ ಘಟನೆ ನಗರದ ಕೆ.ಆರ್ ಪೇಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಮಾಂಬಳ್ಳಿ ಗ್ರಾಮದ ಕೃಷ್ಣೇಗೌಡ, ಸುಗುಣ ದಂಪತಿಯ ಪುತ್ರ ರಂಜಿತ್ ಕೃಷ್ಣ(14) ಮೃತ ದುರ್ದೈವಿ. ಊಟಮಾಡಿ 9ನೇ ತರಗತಿ ಓದುತ್ತಿದ್ದ ರಂಜಿತ್ ಕೈತೊಳೆದುಕೊಳ್ಳಲು ನೀರಿನ ಟ್ಯಾಂಕ್ ಬಂದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ತಲೆ ಹಿಡಿದುಕೊಂಡು ಒದ್ದಾಡುತ್ತಿದ್ದನ್ನು ಗಮನಿಸಿ ಆತನನ್ನು ತಕ್ಷಣ ಆಸ್ಪತ್ರೆಗೆ ರವಾನಿಸಿತಾದರೂ, ಮಾರ್ಗ ಮಧ್ಯೆಯೇ ವಿದ್ಯಾರ್ಥಿ ಅಸುನೀಗಿದ್ದಾನೆ.
ವಿದ್ಯಾರ್ಥಿಯ ಸಾವಿನಿಂದಾಗಿ ಶಾಲೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ ಕೆ.ಆರ್. ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.