
ಕೋಲಾರ(ಅ.14): ಬಸ್ ಪಾಸ್ ವಿಚಾರಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಹಾಗೂ ವಿದ್ಯಾರ್ಥಿ ಮಧ್ಯೆ ಮಾರಾಮಾರಿ ನಡೆದ ಘಟನೆ ಕೋಲಾರದಲ್ಲಿ ನಡೆದಿದೆ.
ಸಾರಿಗೆ ಬಸ್ ಕಂಡಕ್ಟರ್ ವಿದ್ಯಾರ್ಥಿಯೊಬ್ಬನಿಗೆ ಪಾಸ್ ತೋರಿಸುವಂತೆ ಹೇಳಿದ್ದಾರೆ. ಇದರಿಂದ ಕುಪಿತಗೊಂಡ ವಿದ್ಯಾರ್ಥಿ ಕಂಡಕ್ಟರ್ ಜೊತೆ ವಾಗ್ವಾದಕ್ಕೆ ಇಳಿದಿದ್ದಾನೆ. ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸಿ ಮಾರಾಮಾರಿಯೇ ನಡೆದಿದೆ.
ಘಟನೆಯಲ್ಲಿ ನಿರ್ವಾಹಕ ಮಧುಸೂಧನ್ ಬಲ ಕೈ ಮುರಿದಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂದ ನಗರ ಠಾಣೆ ಪೊಲೀಸರು ಹಲ್ಲೆ ನಡೆಸಿದ ವಿದ್ಯಾರ್ಥಿ ರವೀಂದ್ರನನ್ನು ವಶಕ್ಕೆ ಪಡೆದು ವಿದ್ಯಾರ್ಥಿ ಗುಂಪನ್ನು ಚದುರಿಸಿದರು.
ಕೋಲಾರದಿಂದ ಸಿ ಭೈರೆಗೌಡ ಇಂಜನಿಯರ್ ಕಾಲೇಜಿಗೆ ಸಾರಿಗೆ ಬಸ್ ಹೋಗಬೇಕಿತ್ತು. ಈ ಬಸ್'ಗೆ ಚಾಲಕ ಕಂ ನಿರ್ವಾಹಕ ಒಬ್ಬರೇ ಆಗಿದ್ದು, ಬಸ್ ಪಾಸ್ ಚೆಕ್ ಮಾಡುವಾಗ ವಿಳಂಬ ಆಗಿದೆ. ಇದರಿಂದ ಗಲಾಟೆ ನಡೆದಿದೆ ಅಂತ ಹೇಳಲಾಗ್ತಿದೆ. ಇನ್ನು ಈ ಗಲಾಟೆಯಿಂದ ನಗರದ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಿದ್ದು, ಬೇರೆ ವಾಹನಗಳು ಹಾಗೂ ಜನರಿಗೆ ತೊಂದರೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.