
ಬಳ್ಳಾರಿ(ನ.26): ವಿದ್ಯೆ ಕಲಿಸುವ ಗುರು ದೇವರಿಗೆ ಸಮ ಎನ್ನುತ್ತಾರೆ ಆದರೆ ಈ ಕಾಲೇಜಿನ ವಿದ್ಯಾರ್ಥಿಗಳ ಪಾಲಿಗೆ ಪ್ರಾಂಶುಪಾಲರೇ ವಿಲನ್ ಆಗಿದ್ದಾರೆ.
ಬಳ್ಳಾರಿಯ ಮೋಕಾ ಗ್ರಾಮದಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಪ್ರಕಾಶ್ ಚೌಧರಿ ನಮಗೆ ಬೇಡವೇ ಬೇಡವೆಂದು ಪಟ್ಟು ಹಿಡಿದಿರುವ ವಿದ್ಯಾರ್ಥಿಗಳು ದೂರು ನೀಡಿದ್ದಾರೆ. ಬೇಕಾದರೆ ಕಾಲೇಜಿಗೆ ಬೀಗ ಹಾಕಿ ಆದರೆ ವಿನಾಕಾರಣ ಕಿರುಕುಳ, ದಬ್ಬಾಳಿಕೆ ಕೊಡುವ ಪ್ರಿನ್ಸಿಪಾಲ್ ಮಾತ್ರ ಬೇಡ, ಈ ಹಿಂದೆಯೂ ಇದೇ ಕಾರಣಕ್ಕೆ ಶಿಕ್ಷಣ ಇಲಾಖೆ ಪ್ರಿನ್ಸಿಪಾಲ್ ಚೌಧರಿ ಅವರನ್ನು ಅಮಾನತು ಮಾಡಲಾಗಿತ್ತು. ಆದರೆ ಪ್ರಾಂಶುಪಾಲರು ನ್ಯಾಯಾಲಯದ ಮೊರೆ ಹೋಗಿ ಅಮಾನತು ಆದೇಶಕ್ಕೆ ತಡೆ ತಂದು ಕಳೆದೆರಡು ತಿಂಗಳಿನಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಮತ್ತದೇ ಕೆಲಸ ಮಾಡುತ್ತಿದ್ದಾರೆ ಕೂಡಲೇ ಅವರನ್ನು ವಾಪಾಸ್ ಕಳುಹಿಸಿ, ಇಲ್ಲವೇ ಅಮಾನತು ಮಾಡಿ ಎಂದು ವಿದ್ಯಾರ್ಥಿನಿಯರು ಒತ್ತಾಯಿಸಿ ಸ್ಥಳಕ್ಕಾಮಿಸಿದ ಡಿಡಿಪಿಯು ಅವರಿಗೆ ವಿದ್ಯಾರ್ಥಿಗಳೆಲ್ಲ ದೂರು ನೀಡಿದ್ದಾರೆ.
ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸೇರಿದಂತೆ ಕಾಲೇಜಿನ ಉಪನ್ಯಾಸಕರಿಗೂ ವಿನಾಕಾರಣ ಕಿರುಕುಳ ಕೊಡುತ್ತಿದ್ದಾರೆ ಎಂಬ ಆರೋಪವಿದೆ. ಈ ಬಗ್ಗೆ ಪ್ರಿನ್ಸಿಪಾಲ್ ಚೌಧರಿ 'ಸರಕಾರಿ ಆದೇಶದ ಮೇಲೆ ನಾನು ಕಾಲೇಜು ನಿಭಾಯಿಸುತ್ತಿದ್ದೇನೆ, ಯಾವುದೇ ಕಾರಣಕ್ಕೆ ವೈಯಕ್ತಿಕವಾಗಿ ವಿದ್ಯಾರ್ಥಿಗಳಿಗೆ ತೊಂದರೆ ಮಾಡಿಲ್ಲ, ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ ಎಂದು ಹೇಳಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.