
ಕಾರವಾರ: ಕಡಲ ತೀರಕ್ಕೆ ಪ್ರವಾಸಕ್ಕೆ ಹೋದ ಕಾಲೇಜು ವಿದ್ಯಾರ್ಥಿಗಳು ಪೊಲೀಸರ ಅತಿಥಿಯಾಗಿರುವ ಘಟನೆ ಕಾರವಾರದಲ್ಲಿ ನಡೆದಿದೆ.
ಕಾರವಾರದ ರವೀಂದ್ರನಾಥ ಬೀಚ್ ಸುತ್ತಾಡಲು ಬಂದು ಯುವತಿಯನ್ನು ಚುಡಾಯಿಸಿದ ಮಂಡ್ಯ ಜಿಲ್ಲೆಯ ಬಿಜಿಎಸ್ ಕಾಲೇಜು ವಿದ್ಯಾರ್ಥಿಗಳು ಈಗ ಕಂಬಿ ಎಣಿಸುತ್ತಿದ್ದಾರೆ.
ಪ್ರವಾಸಕ್ಕೆಂದು ಬೀಚ್’ಗೆ ಹುಡುಗರು ಆಗಮಿಸಿದ್ದು ಯುವತಿಯೊಬ್ಬಳನ್ನು ಚುಡಾಯಿಸಿದ್ದಾರೆ. ಅದನ್ನು ಸ್ಥಳೀಯರು ಪ್ರಶ್ನಿಸಿದ್ದಕ್ಕೆ, ರಂಪಾಟ ನಡೆಸಿದ ವಿದ್ಯಾರ್ಥಿಗಳು ಡ್ರೈವ್ ಇನ್ ಹೊಟೇಲನ್ನೇ ಧ್ವಂಸ ಗೊಳಿಸಿದ್ದಾರೆ.
ಈ ಸಂಬಂಧ ಬಿಜಿಎಸ್ ಕಾಲೇಜ್’ನ 54 ಪ್ರವಾಸಿ ವಿದ್ಯಾರ್ಥಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.