
ಮಂಡ್ಯ(ಮಾ.09): ಮಂಡ್ಯದ ಕೆ.ಆರ್.ಪೇಟೆಯಲ್ಲಿ ಪ್ರಾಂಶುಪಾಲರ ಎಡವಟ್ಟಿಗೆ ಪಿಯು ಪರೀಕ್ಷೆ ಬರೆಯಬೇಕಿದ್ದ ನೂರಾರು ವಿದ್ಯಾರ್ಥಿನಿಯರು ಪರದಾಡುವ ಸ್ಥಿತಿ ಎದುರಾಗಿತ್ತು. ವಿದ್ಯಾರ್ಥಿನಿಯರ ಪ್ರವೇಶ ಪತ್ರಕ್ಕೆ ಪ್ರಾಂಶುಪಾಲರು ಸಹಿ ಮಾಡದೇ ವಿತರಿಸಿದ್ದು, ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯರ ಪ್ರವೇಶಕ್ಕೆ ಕಾಲೇಜು ನಿರಾಕರಿಸಿದೆ. ಆ ನಂತರ ಪೊಷಕರ ಮನವಿಯಿಂದ ಪರೀಕ್ಷೆ ಬರೆಯಲು ಅನುಮತಿ ನೀಡಿದ್ದಾರೆ.
ಮಂಡ್ಯ ಕೆ. ಆರ್ ಪೇಟೆ ಪಟ್ಟಣದ ಸರ್ಕಾರಿ ಬಾಲಕಿಯರ ಕಾಲೇಜು ಪ್ರಾಂಶುಪಾಲರಿಂದ ಅಚಾತುರ್ಯ ನಡೆದಿದ್ದು, ಪರೀಕ್ಷೆಯ ಸಮಯದಲ್ಲೂ ಪ್ರಾಂಶುಪಾಲರ ಪತ್ತೆಯಾಗಿಲ್ಲ. ಇದರಿಂದ ಆತಂಕಗೊಂಡಿದ್ದ ವಿದ್ಯಾರ್ಥಿನಿಯರ ಪೋಷಕರು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡುವಂತೆ ಮನವಿ ಮಾಡಿಕೊಂಡಿದ್ದು, ಆ ನಂತರ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿ ನೀ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.