ಚಿದಂಬರಂ ಪುತ್ರನ ವಿರುದ್ಧ ಕ್ರಮ ಕೈಗೊಳ್ಳಲು ಸುಬ್ರಮಣಿಯನ್ ಸ್ವಾಮಿ ಆಗ್ರಹ

Published : Feb 20, 2017, 01:03 PM ISTUpdated : Apr 11, 2018, 12:59 PM IST
ಚಿದಂಬರಂ ಪುತ್ರನ ವಿರುದ್ಧ ಕ್ರಮ ಕೈಗೊಳ್ಳಲು ಸುಬ್ರಮಣಿಯನ್ ಸ್ವಾಮಿ ಆಗ್ರಹ

ಸಾರಾಂಶ

ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಮತ್ತು ಅವರ ಒಡೆತನದ ಕಂಪನಿ 21 ವಿದೇಶಿ ಬ್ಯಾಂಕುಗಳಲ್ಲಿ ಗೌಪ್ಯ ಖಾತೆಗಳನ್ನು ಹೊಂದಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಎಂದು ಪ್ರಧಾನಿ ಮೋದಿಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಕೇಳಿಕೊಂಡಿದ್ದಾರೆ.

ನವದೆಹಲಿ (ಫೆ.20): ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಮತ್ತು ಅವರ ಒಡೆತನದ ಕಂಪನಿ 21 ವಿದೇಶಿ ಬ್ಯಾಂಕುಗಳಲ್ಲಿ ಗೌಪ್ಯ ಖಾತೆಗಳನ್ನು ಹೊಂದಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಎಂದು ಪ್ರಧಾನಿ ಮೋದಿಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಕೇಳಿಕೊಂಡಿದ್ದಾರೆ.

ಕಾರ್ತಿ ಚಿದಂಬರಂ ಒಡೆತನದ ಕಂಪನಿ 21 ವಿದೇಶಿ ಬ್ಯಾಂಕುಗಳ ಜೊತೆ ಖಾತೆಗಳನ್ನು ಹೊಂದಿರುವ ಬಗ್ಗೆ  ಮಾಹಿತಿ ನೀಡಿದ್ದು, ಅದಾಗ್ಯೂ  ವಿತ್ತ ಸಚಿವಾಲಯ ಹಾಗೂ ತೆರಿಗೆ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸಿಬಿಐ, ಜಾರಿ ನಿರ್ದೇಶನಾಲಯ ತನಿಖೆ ಕೈಗೊಂಡು ತಾರ್ಕಿಕ ಅಂತ್ಯ ನೀಡಲು ವಿಫಲವಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

ವಿತ್ತ ಸಚಿವಾಲಯದಲ್ಲಿರುವ ಚಿದಂಬರಂ ಸ್ನೇಹಿತರ ಒತ್ತಡಕ್ಕೆ ಮಣಿದು ಆದಾಯ ತೆರಿಗೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ವಾಮಿ ಆರೋಪಿಸಿದ್ದಾರೆ.  ಜಾರಿ ನಿರ್ದೇಶನಾಲಯ ಕಳುಹಿಸಿರುವ 3 ಸಮನ್ಸ್ ಆದೇಶಗಳಿಗೆ ಪ್ರತಿಕ್ರಿಯಿಸಲು ಕಾರ್ತಿ  ಚಿದಂಬರಂ ನಿರಾಕರಿಸಿದ್ದಾರೆ. 

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ