
ಬೆಂಗಳೂರು: ಬೆಂಗಳೂರಿನಲ್ಲಿ ಜೂ.12ಕ್ಕೆ ಪುನಾರಂಭ ಮಾಡಲಿರುವ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಮೊದಲಿಗೆ ಉರ್ದು ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಾರಕ್ಕೊಮ್ಮೆ ಹೊರತರಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.
ಜೂ.12ರಂದು ಈ ಎರಡೂ ಭಾಷೆಗಳಲ್ಲಿ ಪತ್ರಿಕೆಯ ಪುನಾರಂಭದ ಆವೃತ್ತಿಗಳು ಹೊರಬರಲಿವೆ. ನಂತರದ ದಿನಗಳಲ್ಲಿ ಹಿಂದಿ ಭಾಷೆಯಲ್ಲೂ ಪತ್ರಿಕೆ ಮುದ್ರಿಸಿ ದಿನ ಪತ್ರಿಕೆಯಾಗಿ ಮಾರ್ಪಡಿಸಲಾಗುತ್ತದೆ.
ಕಾಂಗ್ರೆಸ್ನ ಎಲ್ಲಾ ಸಚಿವ, ಶಾಸಕರು ಮತ್ತು ಪದಾಧಿಕಾರಿಗಳು ಕಡ್ಡಾಯವಾಗಿ ಚಂದಾದಾರರಾಗಿ ಪತ್ರಿಕೆ ಖರೀದಿ ಮಾಡಬೇಕು. ಜತೆಗೆ ಪ್ರತಿಯೊಬ್ಬರು ತಲಾ 100 ಜನ ಓದುಗರನ್ನು ತಮ್ಮ ಕಡೆಯಿಂದ ಸೃಷ್ಟಿಸಬೇಕು ಎಂದು ಪಕ್ಷ ಸೂಚನೆ ನೀಡಲು ಪಕ್ಷ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.
ಜೂ.11ಕ್ಕೆ ರಾಹುಲ್ ಆಗಮನ?
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪುನಾ ರಂಭ ಕಾರ್ಯ ಕ್ರಮ ಜೂ.12 ರಂದು ಇದ್ದರೂ, ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ಜೂ.11ಕ್ಕೆ ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜೂ.11ರಂದು ನಗರದ ಕೆಲ ಕಾಲೇಜು ವಿದ್ಯಾರ್ಥಿ ಗಳೊಂದಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸುವ ಪ್ರಯತ್ನ ನಡೆಯುತ್ತಿದೆ. ಕಾರ್ಯಕ್ರಮ ಇನ್ನೂ ಖಚಿತವಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.