
ಕಲಬುರಗಿ(ಜ.23): ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಏಕಾಏಕಿ ಬೆಂಕಿ ತಗುಲಿ ಕ್ಷಣಾರ್ಧದಲ್ಲೇ ಸುಟ್ಟು ಭಸ್ಮವಾದ ಘಟನೆ ಕಲಬುರಗಿ ನಗರದ ಬಿದ್ದಾಪುರ ಕಾಲೋನಿಯಲ್ಲಿ ನಡೆದಿದೆ.
ನಿತಿನ್ ಎಂಬುವವರಿಗೆ ಸೇರಿದ ಕಾರಿನ ಮುಂಬಾಗದ ಗಾಜಿನ ವೈಪರ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಇದಾದ ಕ್ಷಣಾರ್ಧದಲ್ಲೇ ಬೆಂಕಿ ಇಡೀ ಕಾರಿಗೆ ವ್ಯಾಪಿಸಿದೆ. ಅದೃಷ್ಟವಶಾತ್ ಕಾರಿನ ಪೆಟ್ರೋಲ್ ಟ್ಯಾಂಕ್'ಗೆ ಬೆಂಕಿ ತಗುಲುವ ಮುನ್ನವೇ ಸ್ಥಳೀಯರ ಕಾರ್ಯಚರಣೆಯಿಂದ ಭಾರೀ ದುರಂತ ತಪ್ಪಿದಂತಾಗಿದೆ.
ಕಾರಿನಲ್ಲಿದ್ದ ಮದುವೆಯ ಬಟ್ಟೆ ಹಾಗೂ ಆಮಂತ್ರಣ ಪತ್ರಿಕೆಗಳು ಸುಟ್ಟು ಭಸ್ಮವಾಗಿವೆ. ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.