ಅವನು ಯಾವಾಗಲು ನನ್ನ ಗೆಳೆಯ : ಶೀಘ್ರದಲ್ಲೇ ಒಟ್ಟಿಗೆ ಸಿನಿಮಾ

Published : Apr 27, 2018, 07:34 PM ISTUpdated : Apr 27, 2018, 07:39 PM IST
ಅವನು ಯಾವಾಗಲು ನನ್ನ ಗೆಳೆಯ : ಶೀಘ್ರದಲ್ಲೇ ಒಟ್ಟಿಗೆ ಸಿನಿಮಾ

ಸಾರಾಂಶ

ಗಾಂಧಿನಗರ ಮಾತ್ರವಲ್ಲದೆ ಲಕ್ಷಾಂತರ ಅಭಿಮಾನಿಗಳು ಕೂಡ ಇಬ್ಬರು ಒಂದಾಗುವುದನ್ನು ಬಯಸುತ್ತಿದ್ದಾರೆ. ಸದ್ಯ ಸುದೀಪ್ ಅಂಬಿ ನಿಂಗೆ ವಯಸಾಯ್ತೋ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರೆ, ದರ್ಶನ್ ಕುರುಕ್ಷೇತ್ರ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತಲ್ಲಿನರಾಗಿದ್ದಾರೆ.   

ಬೆಂಗಳೂರು(ಏ.27): ಚಾಲೆಂಜಿಂಗ್ ಸ್ಟಾರ್  ದರ್ಶನ್ ಹಾಗೂ ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ ಚಿತ್ರ ಶೀಘ್ರದಲ್ಲಿಯೇ ಸೆಟ್ಟೇರುವ ಸಾಧ್ಯತೆಯಿದೆ.  ಕೆಲವು ದಿನಗಳಿಂದ ದೂರವಾಗಿದ್ದ  ತಮ್ಮ ಆಪ್ತ ಸ್ನೇಹಿತನ ಬಗ್ಗೆ ಸುದೀಪ್ ಒಳ್ಳೆಯ ಮಾತನಾಡಿದ್ದಾರೆ.  
ಮಲೇಷ್ಯದಲ್ಲಿರುವ ಕಿಚ್ಚ ' ಅಭಿಮಾನಿಯೊಬ್ಬ ನೀವಿಬ್ಬರು ಒಂದಾಗಿ, ಜೊತೆಯಾಗಿ  ಸಿನಿಮಾ ಮಾಡಿ ಎಂದು ಮನವಿ ಮಾಡಿದ ಪ್ರಶ್ನೆಗೆ ಉತ್ತರಿಸುತ್ತಾ ತಮ್ಮ ಸ್ನೇಹ ಎಂದಿಗೂ ದೂರವಾಗಿಲ್ಲ. ಇಬ್ಬರಿಗೂ ಒಂದಿಕೆಯಾಗುವ ಒಂದೊಳ್ಳೆಯ ಕಥೆ ಸಿಕ್ಕರೆ  ಇಬ್ಬರು ಒಟ್ಟಾಗಿಯೇ ಸಿನಿಮಾ ಮಾಡುತ್ತೇವೆ ಎಂದು ಸ್ನೇಹಹಸ್ತವನ್ನು ಚಾಚಿದ್ದಾರೆ. ಈ ಮಾತುಗಳನ್ನು ಕೇಳಿದರೆ ಇನ್ನು ಕೆಲವೇ ದಿನಗಳಲ್ಲಿ ಇಬ್ಬರು ಒಟ್ಟಾಗಿ ನಟಿಸುವುದು ಯಾವುದೇ ಸಂದೇಹವಿಲ್ಲ. 
ಗಾಂಧಿನಗರ ಮಾತ್ರವಲ್ಲದೆ ಲಕ್ಷಾಂತರ ಅಭಿಮಾನಿಗಳು ಕೂಡ ಇಬ್ಬರು ಒಂದಾಗುವುದನ್ನು ಬಯಸುತ್ತಿದ್ದಾರೆ. ಸದ್ಯ ಸುದೀಪ್ ಅಂಬಿ ನಿಂಗೆ ವಯಸಾಯ್ತೋ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರೆ, ದರ್ಶನ್ ಕುರುಕ್ಷೇತ್ರ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತಲ್ಲಿನರಾಗಿದ್ದಾರೆ.    

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸದನದಲ್ಲಿ Siddaramaiah vs Arvind Bellad ಒಳಮೀಸಲು ಹೆಚ್ಚಳ ಜಟಾಪಟಿ! ಯತ್ನಾಳ್‌ಗೆ ಸಿಎಂ ಸಂವಿಧಾನ ಪಾಠ
ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!