
ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಹೆಬ್ಬುಲಿ ಚಿತ್ರದ ಧ್ವನಿಸುರಳಿ ಬಿಡುಗಡೆ ಮಾಡಲಾಯ್ತು. ಕೋಟಿಗೊಬ್ಬ 2 ಚಿತ್ರದ ನಂತರ ಸುದೀಪ್ ಹೊಸ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದಾಜು 25 ಕೋಟಿ ವೆಚ್ಚದ ಈ ಚಿತ್ರಕ್ಕೆ ಕೃಷ್ಣ ಆ್ಯಕ್ಷನ್ ಕಟ್ ಹೇಳಿದ್ದು ಹಾಸ್ಯನಟ ಚಿಕ್ಕಣ್ಣ, ಖಳನಟ ರವಿಶಂಕರ್ ಅಭಿನಯಿಸಿದ್ದಾರೆ. ಈ ಸಮಾರಂಭದಲ್ಲಿ ನಟ ಸುದೀಪ್ ಕೂಡ ಕೊಂಚ ಬೇಸರಗೊಂಡಿದ್ದರು.ಕಾರಣ ಇಷ್ಟೆ ಚಿತ್ರದ ಹಾಡುಗಳು ಬಿಡುಗಡೆಗೆ ಮುನ್ನವೇ ಲೀಕ್ ಆಗಿತ್ತು. ಇದಕ್ಕೆ ಬೇಸರ ವ್ಯಕ್ತಪಡಿಸಿದ ಕಿಚ್ಚ ಚಿತ್ರದ ಹಾಡುಗಳನ್ನು ಲೀಕ್ ಮಾಡಿದ ಪುಣ್ಯಾತ್ಮನು ಒಂದಿಷ್ಟು ಕಾಸು ಮಾಡಿಕೊಳ್ಳಲಿ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.