
ಬೆಂಗಳೂರು(ಫೆ.22): ಶಶಿಕಲಾ ಹಾಗೂ ಇಳವರಸಿ ಜೊತೆ ಪರಪ್ಪನ ಅಗ್ರಹಾರದಲ್ಲಿ 4 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ಜಯಲಲಿತಾ ದತ್ತುಪುತ್ರ ಜೈಲಿನಲ್ಲಿ ಕೂಗಾಟ ನಡೆಸಿ ರಂಪಾಟ ನಡೆಸಿದ್ದಾನೆ ಎನ್ನಲಾಗಿದೆ. ನಿನ್ನೆಯಿಂದ ಸುಧಾಕರನ್ ಭೇಟಿಗೆ ಹಲವಾರು ಅಭಿಮಾನಿಗಳು ಜೈಲಿಗೆ ಆಗಮಿಸಿದ್ದರು. ಆದರೆ ಕಾರಗೃಹದ ಅಧಿಕಾರಿಗಳು ಅಭಿಮಾನಿಗಳ ಭೇಟಿಗೆ ಅವಕಾಶ ನೀಡಿರಲಿಲ್ಲ. ಈ ವಿಷಯಕ್ಕಾಗಿ ಜೈಲಿನ ಅಧಿಕಾರಿಗಳು ಹಾಗೂ ಸಹ ಕೈದಿಗಳ ಜೊತೆ ಕೂಗಾಡಿ ರಂಪಾಟ ಮಾಡಿದ್ದಾನೆ. ಅಲ್ಲದೆ ಜೈಲಿನ ಊಟ ತನ್ನ ದೇಹಕ್ಕೆ ಒಗ್ಗೋದಿಲ್ಲ, ಮನೆ ಊಟ ಕೊಡಿ ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದು, ಆದರೆ ಅಧಿಕಾರಿಗಳು ತಿರಸ್ಕರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.