
ಏಕ ಶ್ರೇಣಿ ಏಕ ರೀತಿಯ ಪಿಂಚಣಿ ಯೋಜನೆಯ ಅನುಷ್ಠಾನದಲ್ಲಿನ ವಿಳಂಬಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಮಾಜಿ ಸೈನಿಕ ಗ್ರೇವಾಲ್ ಅವರ ಕುಟುಂಬಕ್ಕೆ ಸಿಎಂ ಅರವಿಂದ ಕೇಜ್ರಿವಾಲ್ 1 ಕೋಟಿ ರೂ. ಪರಿಹಾರ ಘೋಷಿಸಿದ್ದಾರೆ. ಹರಿಯಾಣದ ಭಿವಾನಿಯಲ್ಲಿನ ನಿವಾಸಕ್ಕೆ ತೆರಳಿ ಅವರ ಶೋಕತಪ್ತ ಕುಟುಂಬ ಸದಸ್ಯರನ್ನು ಭೇಟಿಯಾಗಿ ಬಳಿಕ ಗ್ರೇವಾಲ್ ಅವರ ಅಂತ್ಯಕ್ರಿಯೆಯಲ್ಲೂ ಭಾಗಿಯಾದರು. ಗ್ರೇವಾಲ್ ಕುಟುಂಬದವರಿಗೆ ಸಾಂತ್ವನ ಹೇಳಿದ ಕೇಜ್ರಿವಾಲ್, ಮೃತ ಯೋಧನ ಕುಟುಂಬದವರನ್ನು ಪ್ರಧಾನಿ ಮೋದಿ ಭೇಟಿಯಾಗಬೇಕಿತ್ತು; ಯಾವ ದರ್ಪದ ಮನೋಭಾವದಿಂದಾಗಿ ಕಾಂಗ್ರೆಸ್ ಪಕ್ಷ ಅಧಿಕಾರದಿಂದ ಕೆಳಗಿಳಿಯಿತೋ ಅದೇ ದರ್ಪದ ಫಲವಾಗಿ ಬಿಜೆಪಿ ಕೂಡ ಅಧಿಕಾರದಿಂದ ಕೆಳಗಿಳಿಯಲಿದೆ ಎಂದು ಹೇಳುವ ಮೂಲಕ ಕೇಜ್ರಿವಾಲ್, ಓಆರ್ಓಪಿ ರಾಜಕೀಯದ ಬೆಂಕಿಗೆ ಇನ್ನಷ್ಟು ತುಪ್ಪ ಸುರಿಯುವ ಕೆಲಸ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.