ರಾಜಕಾರಣದಿಂದ ಬೇಸತ್ತು ಧರ್ಮಸ್ಥಳದಲ್ಲಿ ದಂಪತಿಗಳ ಆತ್ಮಹತ್ಯೆ..!

Published : May 09, 2018, 12:50 AM IST
ರಾಜಕಾರಣದಿಂದ ಬೇಸತ್ತು ಧರ್ಮಸ್ಥಳದಲ್ಲಿ ದಂಪತಿಗಳ ಆತ್ಮಹತ್ಯೆ..!

ಸಾರಾಂಶ

ಮೃತ ಮೃತ್ಯುಂಜಯ ಬ್ಯಾಡಗಿ ಕ್ಷೇತ್ರದ ಕಾಂಗ್ರೆಸ್ ಆಭ್ಯರ್ಥಿ ಎಸ್.ಆರ್.ಪಾಟೀಲ್ ಸೋದರ ಸಂಬಂಧಿಯಾಗಿದ್ದು, ಕಳೆದ ವಾರ ಸಿಎಂ ಸಿದ್ದರಾಮಯ್ಯ ಇವರ ಮನೆಗೆ ಬೇಟಿ ನೀಡಿದ್ದರು. 

ಮಂಗಳೂರು(ಮೇ.08]: ಪ್ರಜಾಪ್ರಭುತ್ವ ವ್ಯವಸ್ಥೆ ಹದಗೆಟ್ಟಿರುವ ಹಿನ್ನಲೆ ಮತ್ತು ರಾಜಕೀಯ ಹಣ, ಹೆಂಡಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆ‌ ಮಾಡಿಕೊಂಡಿರುವ ಘಟನೆ ಧರ್ಮಸ್ಥಳದ ಲಾಡ್ಜ್’ನಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ ಬ್ಯಾಡಗಿ ಮೂಲದ ದಂಪತಿ ಮೃತ್ಯುಂಜಯ (60) ಹಾಗೂ ನೇತ್ರಾವತಿ (54) ನೇಣಿಗೆ ಶರಣಾದ ಮೃತ ದುರ್ದೈವಿಗಳಾಗಿದ್ದಾರೆ. ರಾಜಕೀಯದಲ್ಲಿ ಹಣ, ಹೆಂಡದಿಂದ ಕೀಳುಮಟ್ಟಕ್ಕೆ ಇಳಿದಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಳಾದ ಪ್ರಜಾಪ್ರಭುತ್ವವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ನೋಡಿಕೊಳ್ಳಬೇಕು. ಅವರು ಸರಿ ದಾರಿಗೆ ತರುತ್ತಾರೆ ಅಂತಾ ಇಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್’ನಲ್ಲಿ ಈ ದಂಪತಿಗಳು ಉಲ್ಲೇಖಿಸಿದ್ದಾರೆ.
ಮೃತ ಮೃತ್ಯುಂಜಯ ಬ್ಯಾಡಗಿ ಕ್ಷೇತ್ರದ ಕಾಂಗ್ರೆಸ್ ಆಭ್ಯರ್ಥಿ ಎಸ್.ಆರ್.ಪಾಟೀಲ್ ಸೋದರ ಸಂಬಂಧಿಯಾಗಿದ್ದು, ಕಳೆದ ವಾರ ಸಿಎಂ ಸಿದ್ದರಾಮಯ್ಯ ಇವರ ಮನೆಗೆ ಬೇಟಿ ನೀಡಿದ್ದರು. 
ಈ ಆತ್ಮಹತ್ಯೆ ಕುರಿತಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಡಿಗೋ ಅವಾಂತರ: ನಾಲ್ವರು ಫ್ಲೈಟ್ ಆಪರೇಷನ್ ಇನ್ಸ್‌ಪೆಕ್ಟರ್‌ಗಳ ವಜಾ ಮಾಡಿದ ಡಿಜಿಸಿಎ
Railway Drug Mafia: ರೈಲುಗಳಲ್ಲಿ ಡ್ರಗ್ಸ್ ಮಾಫಿಯಾ ಜಾಲ.. ಹೆಚ್ಚಾಗುತ್ತಲೇ ಇದೆ ಗಾಂಜಾ ಸಾಗಣೆ