
ಮಂಡ್ಯ (ಮಾ. 05): ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿಗೆ ಬಲಿಯಾದ ಮಂಡ್ಯ ಜಿಲ್ಲೆ ಮದ್ದೂರಿನ ಸಿಆರ್ಪಿಎಫ್ ಯೋಧ ಎಚ್. ಗುರು ಕುಟುಂಬಕ್ಕೆ ಮಾಜಿ ಸಚಿವ ದಿ. ಅಂಬರೀಷ್ ಪತ್ನಿ ಸುಮಲತಾ ಅವರು ಈ ಹಿಂದೆ ಕೊಟ್ಟಮಾತಿನಂತೆ 20 ಗುಂಟೆ ಜಮೀನು ದೇಣಿಗೆ ಕೊಟ್ಟಿದ್ದು, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಸ್ತಾಂತರಿಸಿದರು.
ಸರ್ಜಿಕಲ್ ಸ್ಟ್ರೈಕ್ಗೆ ಸಂಭ್ರಮಿಸೋದು ಬಿಟ್ಟು ಸಿಎಂ ಪುತ್ರನ ಸಿನಿಮಾ ನೋಡ್ಬೇಕಾ?
ಸುಮಲತಾ ಅವರು ಹುತಾತ್ಮ ಯೋಧನ ಕುಟುಂಬಕ್ಕೆ ಭೂಮಿಯ ದಾಖಲೆ ಪತ್ರವನ್ನು ನೀಡಿದರು. ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದ ಜಮೀನು ಅಂಬರೀಷ್ ಅವರಿಗೆ ಪಿತ್ರಾರ್ಜಿತವಾಗಿ ಬಂದಿತ್ತು. ಈ ಜಮೀನನ್ನು ಅಂಬರೀಷ್ ತಮ್ಮ ಪುತ್ರ ಅಭಿಷೇಕ್ಗೆ ಪಾಲು ಮಾಡಿ ಖಾತೆ ಮಾಡಿಕೊಟ್ಟಿದ್ದರು. ಈಗ ಅದರಲ್ಲಿ 20 ಗುಂಟೆಯಷ್ಟುಜಾಗವನ್ನು ಹುತಾತ್ಮ ಯೋಧನ ಪತ್ನಿ ಹೆಸರಿಗೆ ಸುಮಲತಾ ಅವರು ದಾನಪತ್ರ ಮಾಡಿಸಿದ್ದಾರೆ.
ಯಾವ ಷರತ್ತೂ ಹಾಕಿಲ್ಲ:
ನಂತರ ಮಾತನಾಡಿದ ಸುಮಲತಾ, ನಾನು ಈ ಹಿಂದೆ ಹೇಳಿದಂತೆ ಜಮೀನು ದಾನ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಕುಟುಂಬದವರ ನಿರ್ಧಾರದಂತೆ ನೋಂದಣಿ ಮಾಡಿಕೊಡುತ್ತೇವೆ. ಅದರಲ್ಲಿ ಸ್ಮಾರಕ ಮಾಡ್ತಾರೋ, ವ್ಯವಸಾಯ ಮಾಡ್ತಾರೋ ಎನ್ನುವುದು ಅವರಿಗೆ ಬಿಟ್ಟವಿಚಾರ ಎಂದರು.
ಬೆಂಗಳೂರಿನ ಯಶವಂತಪುರದಿಂದ ಹೊರಟ ರೈಲಿಗೆ ಬೆಂಕಿ
ಜಮೀನಿಗೆ ಸಂಬಂಧಿಸಿ ಯಾವುದೇ ಷರತ್ತನ್ನೂ ಹಾಕಿಲ್ಲ. ಜಮೀನನ್ನು ಅವರಿಗೆ ನೀಡಿದ ಬಳಿಕ ಅದರ ಮೇಲೆ ನನಗೆ ಯಾವುದೇ ಅಧಿಕಾರವಿಲ್ಲ. ಅವರಿಗೆ ಯಾವ ರೀತಿ ಅನುಕೂಲವಾಗುತ್ತದೋ ಅದರಂತೆ ಬಳಸಿಕೊಳ್ಳಲಿ. ನೋವಿನಲ್ಲಿರುವ ಕುಟುಂಬದವರಿಗೆ ಈ ಜಮೀನನ್ನು ಇದೇ ಉದ್ದೇಶಕ್ಕೆ ಬಳಸಿಕೊಳ್ಳುವಂತೆ ಒತ್ತಡ ಹೇರುವುದಿಲ್ಲ ಎಂದು ನುಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.