
ಮೈಸೂರು(ಮಾ.07): ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಸುಮಲತಾ ಅಂಬರೀಷ್, ಬಿಜೆಪಿಯತ್ತ ಒಲವು ಹೊಂದಿದ್ದಾರೆಯೇ ಎಂಬ ಅನುಮಾನ ಇದೀಗ ಮೂಡಿದೆ.
ಮೈಸೂರಿನಲ್ಲಿ ಚುನಾವಣೆ ಸ್ಪರ್ಧೆ ಕುರಿತು ಮಾತನಾಡಿದ ಸುಮಲತಾ, ತಮಗೆ ಮಂಡ್ಯ ಜನರು ಆಶೀರ್ವಾದ ಮಾಡುವ ಭರವಸೆ ಇದೆ ಎಂದು ಹೇಳಿದರು. ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರು ಕೂಡ ತಮ್ಮ ಪರ ಇದ್ದು, ಚುನಾವಣೆಯಲ್ಲಿ ತಮ್ಮ ಪರವಾಗಿ ಪ್ರಚಾರ ಮಾಡಲಿದ್ದಾರೆ ಎಂದು ಸುಮಲತಾ ವಿಶ್ವಾಸ ವ್ಯಕ್ತಪಡಿಸಿದರು.
"
ಈ ಮಧ್ಯೆ ಬಿಜೆಪಿ ಬೆಂಬಲದ ಕುರಿತು ಕೇಳಲಾದ ಪ್ರಶ್ನೆಗೆ ಖಚಿತ ಉತ್ತರ ನೀಡದ ಸುಮಲತಾ, ಒಂದು ವೇಳೆ ಬಿಜೆಪಿ ಮುಖಂಡರು ಸಂಪರ್ಕಿಸಿದರೆ ಅವರೊಂದಿಗೆ ಚರ್ಚಿಸಿ ತಮ್ಮ ನಿರ್ಧಾರ ತಿಳಿಸುವುದಾಗಿ ಸ್ಪಷ್ಟಪಡಿಸಿದರು.
ಇದೇ ವೇಳೆ ಮಂಡ್ಯ ಬಿಟ್ಟು ಬೇರೆಲ್ಲೂ ಸ್ಪರ್ಧೆ ಮಾಡುವುದು ಸಾಧ್ಯವೇ ಇಲ್ಲ ಎಂದ ಸುಮಲತಾ, ತಮಗೆ ಯಾವುದೇ ಹುದ್ದೆಯ ಆಸೆಯಿಲ್ಲ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.