
ಮಂಡ್ಯ [ಜೂ.21]: ಬೆಳೆದು ನಿಂತ ಬೆಳೆಗಳಿಗೆ ನೀರಿಲ್ಲದೇ ರೈತರು ಪರಿತಪಿಸುತ್ತಿದ್ದಾರೆ. ಕೂಡಲೇ ಕೃಷ್ಣರಾಜಸಾಗರ ಜಲಾಶಯ ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸುವ ಮೂಲಕ ಬೆಳೆಗಳನ್ನು ಸಂರಕ್ಷಣೆ ಮಾಡಬೇಕು ಎಂದು ಸಂಸದೆ ಸುಮಲತಾ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ಗೆ ಮನವಿ ನೀಡಿದ್ದಾರೆ.
ಪೂರ್ವ ಮುಂಗಾರು ಕೊರತೆಯಿಂದ ರೈತರು ಭೂಮಿಯನ್ನು ಹದಗೊಳಿಸಲು ಸಾಧ್ಯವಾಗಿಲ್ಲ. ಮುಂಗಾರು ಮಳೆಯೂ ಸಕಾಲಕ್ಕೆ ಬಾರದೆ ಬರದ ಛಾಯೆ ಆವರಿಸಿದೆ. ರೈತರು ಬೆಳೆದು ನಿಂತ ಬೆಳೆಗಳಿಗೆ ನೀರಿಲ್ಲದೆ ಪರಿತಪಿಸುತ್ತಿದ್ದಾರೆ. ಬೆಳೆಗಳ ರಕ್ಷಣೆಗೆ ತಕ್ಷಣವೇ ನೀರಿನ ಅಗತ್ಯವಿದೆ. ಕೂಡಲೇ ಕೃಷ್ಣರಾಜಸಾಗರ ಜಲಾಶಯ ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸುವ ಮೂಲಕ ಬೆಳೆಗಳನ್ನು ಸಂರಕ್ಷಣೆ ಮಾಡುವಂತೆ ಮನವಿ ಮಾಡಿದ್ದಾರೆ.
ಕಾವೇರಿ ನೀರು ನಿಯಂತ್ರಣ ಮಂಡಳಿ ಅಧ್ಯಕ್ಷರಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು ನೀರು ಬಿಡುಗಡೆಗೆ ಸೂಚನೆ ನೀಡುವಂತೆ ಕೋರಿದ್ದಾರೆ. ಮನವಿ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಜಲಸಂಪನ್ಮೂಲ ಸಚಿವರು ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಇದರ ಜೊತೆಗೆ ಕೇಂದ್ರ ಸಚಿವ ಸದಾನಂದಗೌಡ ಅವರನ್ನೂ ಭೇಟಿಯಾಗಿ ಕಾವೇರಿ ಕೊಳ್ಳದ ನೀರಿನ ಸಮಸ್ಯೆ ಕುರಿತು ವಿವರಿಸಿ ರೈತರ ಜಮೀನಿಗೆ ನೀರು ಬಿಡುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.