'ಮಾತಿನಂತೆ ಜಮೀನು ದಾನ ಮಾಡಿದ್ದೇನೆ, ಯಾವ ಷರತ್ತೂ ಹಾಕಿಲ್ಲ'

Published : Mar 05, 2019, 05:14 PM ISTUpdated : Mar 05, 2019, 05:25 PM IST
'ಮಾತಿನಂತೆ ಜಮೀನು ದಾನ ಮಾಡಿದ್ದೇನೆ, ಯಾವ ಷರತ್ತೂ ಹಾಕಿಲ್ಲ'

ಸಾರಾಂಶ

ಯೋಧ ಗುರು ಪತ್ನಿಗೆ ಸುಮಲತಾ ಅರ್ಧ ಎಕರೆ ದಾನ| ದಾಖಲೆ ಹಸ್ತಾಂತರಿಸಿದ ಅಂಬರೀಷ್‌ ಪತ್ನಿ| ಶೀಘ್ರದಲ್ಲೇ ನೋಂದಣಿ ಮಾಡಿಕೊಡುವೆ

ಮಂಡ್ಯ[ಮಾ.05]: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿಗೆ ಬಲಿಯಾದ ಮಂಡ್ಯ ಜಿಲ್ಲೆ ಮದ್ದೂರಿನ ಸಿಆರ್‌ಪಿಎಫ್‌ ಯೋಧ ಎಚ್‌. ಗುರು ಕುಟುಂಬಕ್ಕೆ ಮಾಜಿ ಸಚಿವ ದಿ. ಅಂಬರೀಷ್‌ ಪತ್ನಿ ಸುಮಲತಾ ಅವರು ಈ ಹಿಂದೆ ಕೊಟ್ಟಮಾತಿನಂತೆ 20 ಗುಂಟೆ ಜಮೀನು ದೇಣಿಗೆ ಕೊಟ್ಟಿದ್ದು, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸೋಮವಾರ ಹಸ್ತಾಂತರಿಸಿದ್ದಾರೆ.

ಹುತಾತ್ಮ ಯೋಧ ಗುರು ಪತ್ನಿಗೆ ಉಚಿತ ಆರೋಗ್ಯ ವಿಮೆ

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸುಮಲತಾ ಅವರು ಹುತಾತ್ಮ ಯೋಧನ ಕುಟುಂಬಕ್ಕೆ ಈ ದಾನಪತ್ರವನ್ನು ನೀಡಿದರು. ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದ ಜಮೀನು ಅಂಬರೀಷ್‌ ಅವರಿಗೆ ಪಿತ್ರಾರ್ಜಿತವಾಗಿ ಬಂದಿತ್ತು. ಈ ಜಮೀನನ್ನು ಅಂಬರೀಷ್‌ ತಮ್ಮ ಪುತ್ರ ಅಭಿಷೇಕ್‌ಗೆ ಪಾಲು ಮಾಡಿ ಖಾತೆ ಮಾಡಿಕೊಟ್ಟಿದ್ದರು. ಈಗ ಅದರಲ್ಲಿ 20 ಗುಂಟೆಯಷ್ಟುಜಾಗವನ್ನು ಹುತಾತ್ಮ ಯೋಧನ ಪತ್ನಿ ಹೆಸರಿಗೆ ಸುಮಲತಾ ಅವರು ದಾನಪತ್ರ ಮಾಡಿಸಿದ್ದಾರೆ.

ಯಾವ ಷರತ್ತೂ ಹಾಕಿಲ್ಲ:

ನಂತರ ಮಾತನಾಡಿದ ಸುಮಲತಾ, ನಾನು ಈ ಹಿಂದೆ ಹೇಳಿದಂತೆ ಜಮೀನು ದಾನ ಮಾಡಿದ್ದೇನೆ. ಮುಂದಿನ ದಿನ​ಗ​ಳಲ್ಲಿ ಕುಟುಂಬ​ದ​ವರ ನಿರ್ಧಾ​ರ​ದಂತೆ ನೋಂದಣಿ ಮಾಡಿ​ಕೊ​ಡು​ತ್ತೇವೆ. ಅದ​ರಲ್ಲಿ ಸ್ಮಾರಕ ಮಾಡ್ತಾರೋ, ವ್ಯವ​ಸಾಯ ಮಾಡ್ತಾರೋ ಎನ್ನುವುದು ಅವರಿಗೆ ಬಿಟ್ಟವಿಚಾರ ಎಂದರು.

15 ಕೋಟಿ ಬಂದಿಲ್ಲ, ಕಿತ್ತಾಟವೂ ನಡೆದಿಲ್ಲ: ಯೋಧ ಗುರು ಪತ್ನಿ

ಜಮೀ​ನಿಗೆ ಸಂಬಂಧಿ​ಸಿ ಯಾವುದೇ ಷರ​ತ್ತನ್ನೂ ಹಾಕಿಲ್ಲ. ಜಮೀ​ನ​ನ್ನು ಅವ​ರಿಗೆ ನೀಡಿದ ಬಳಿಕ ಅದರ ಮೇಲೆ ನನಗೆ ಯಾವುದೇ ಅಧಿ​ಕಾ​ರ​ವಿ​ಲ್ಲ. ಅವ​ರಿಗೆ ಯಾವ ರೀತಿ ಅನು​ಕೂ​ಲ​ವಾ​ಗುತ್ತದೋ ಅದ​ರಂತೆ ಬಳ​ಸಿ​ಕೊ​ಳ್ಳಲಿ. ನೋವಿ​ನ​ಲ್ಲಿ​ರುವ ಕುಟುಂಬ​ದ​ವ​ರಿಗೆ ಈ ಜಮೀ​ನನ್ನು ಇದೇ ಉದ್ದೇ​ಶಕ್ಕೆ ಬಳ​ಸಿ​ಕೊ​ಳ್ಳು​ವಂತೆ ಒತ್ತಡ ಹೇರು​ವು​ದಿಲ್ಲ ಎಂದು ನುಡಿ​ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ