ಮಂಡ್ಯಕ್ಕಾಗಿ ಸುಮಲತಾ ಬರೆದ ಪತ್ರಕ್ಕೆ ಸಿಕ್ಕ ಸೂಕ್ತ ಸ್ಪಂದನೆ

Published : Jul 24, 2019, 09:52 AM IST
ಮಂಡ್ಯಕ್ಕಾಗಿ ಸುಮಲತಾ ಬರೆದ ಪತ್ರಕ್ಕೆ ಸಿಕ್ಕ ಸೂಕ್ತ ಸ್ಪಂದನೆ

ಸಾರಾಂಶ

ಮಂಡ್ಯದ ರೈತರಿಗಾಗಿ ಸಂಸದೆ ಸುಮಲತಾ ಅಂಬರೀಷ್ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದು, ಇದಕ್ಕೆ ಸೂಕ್ತ ಸ್ಪಂದನೆ ದೊರಕಿದೆ.

ನವದೆಹಲಿ/ಮಂಡ್ಯ [ಜು.24]: ಮಂಡ್ಯದ ಕಾಲುವೆ ಗಳಿಗೆ ಕೃಷ್ಣರಾಜಸಾಗರ ಅಣೆಕಟ್ಟಿನಿಂದ ನೀರು ಹರಿಸುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮಾಡಿಕೊಂಡಿದ್ದ ಮನವಿಯನ್ನು ಸೂಕ್ತ ಕ್ರಮಕ್ಕಾಗಿ ಜಲ ಶಕ್ತಿ ಸಚಿವಾಲಯದ ಕಾರ್ಯದರ್ಶಿಗಳಿಗೆ ಕಳುಹಿಸಿಕೊಟ್ಟಿರುವುದಾಗಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ.

ಸುಮಲತಾ ಅಂಬರೀಷ್ ಅವರು ಜೂನ್ 20 ರಂದು ಪತ್ರ ಬರೆದು ಮಂಡ್ಯದ ಕೃಷ್ಣರಾಜಸಾಗರ ಜಲಾಶಯದಿಂದ ಮಂಡ್ಯದ ಕಾಲುವೆಗಳಿಗೆ 2 ಟಿಎಂಸಿ ನೀರು ನೀಡುವಂತೆ ಕೋರಿ ಪತ್ರ ಬರೆದಿದ್ದರು.

ಜೆಡಿಎಸ್ ಆಕ್ರೋಶ: ಇದೇವೇಳೆ ಸುಮಲತಾ ಅಂಬರೀಷ್ ಅವರ ಫೇಸ್‌ಬುಕ್ ಪೇಜ್‌ನಲ್ಲಿ ‘ನನ್ನ ಮನವಿಗೆ ಸ್ಪಂದಿಸಿ ನೀರನ್ನು ಮಂಡ್ಯ ನಾಲೆಗೆ ಹರಿಸಲು ಆದೇಶಿಸಿದ ಕೇಂದ್ರ ಸಚಿವರಿಗೆ ಮಂಡ್ಯ ರೈತರ ಪರವಾಗಿ ನನ್ನ ತುಂಬು ಹೃದಯದ ಅಭಿನಂದನೆಗಳು’ ಎಂದು ಬರೆದುಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!