
ಬೆಂಗಳೂರು : ಪದವಿಪೂರ್ವ ಶಿಕ್ಷಣ ಇಲಾಖೆಯ 2017-18ನೇ ಸಾಲಿನ ಶೈಕ್ಷಣಿಕ ಸಾಲಿನ ಕಾರ್ಯ ಚಟುವಟಿಕೆಗಳು ಪೂರ್ಣಗೊಂಡಿದ್ದು, ಪರಿಷ್ಕೃತ ವೇಳಾಪಟ್ಟಿಪ್ರಕಾರ ಪಿಯುಸಿ ವಿದ್ಯಾರ್ಥಿಗಳಿಗೆ ಮಾ.18ರಿಂದ ಬೇಸಿಗೆ ರಜೆ ನೀಡಲಾಗುತ್ತಿದೆ ಎಂದು ಪಿಯು ಇಲಾಖೆ ಪ್ರಕಟಿಸಿದೆ.
ಈ ಮೊದಲಿನ ವಾರ್ಷಿಕ ವೇಳಾಪಟ್ಟಿಪ್ರಕಾರ ಕೆಲಸದ ಕೊನೆಯ ದಿನ ಮಾ.20 ಆಗಿತ್ತು. ಪರೀಕ್ಷೆಗಳು ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷದ ಕೆಲಸಕ್ಕೆ ಮಾ.19 ಕೊನೆಯ ದಿನವಾಗಿದೆ. ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಮಾ.17ರಂದು ಪರೀಕ್ಷೆ ಮುಗಿಯಲಿದೆ.
ಮಾ.18ರಿಂದ ಬೇಸಿಗೆ ನೀಡಲಾಗುತ್ತಿದೆ. ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಮಾ.19ರಂದು ಫಲಿತಾಂಶ ಪ್ರಕಟಿಸಿ ಅಂದಿನಿಂದಲೇ ರಜೆ ನೀಡಲಾಗುತ್ತದೆ. 2018-19ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿ ಆರಂಭದ ದಿನಗಳನ್ನು ನಂತರ ತಿಳಿಸುವುದಾಗಿ ಪಿಯು ಇಲಾಖೆ ಪ್ರಕಟಣೆ ಹೊರಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.